ಈಶ್ವರಪ್ಪ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ
ಬೆಂಗಳೂರು, ಅ.29: ಕರ್ನಾಟಕ ಬಂದ್ಗೆ ಕರೆ ನೀಡಿದ ಆರೋಪ ಎದುರಿಸುತ್ತಿರುವ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪಗೆ ಸಂಕಷ್ಟ ಎದುರಾಗಿದೆ. ಸಿಟಿ ಸಿವಿಲ್ ಕೋರ್ಟ್ ಕೆ.ಎಸ್.ಈಶ್ವರಪ್ಪಗೆ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ.
2011ರಲ್ಲಿ ಕರ್ನಾಟಕ ಬಂದ್ಗೆ ಈಶ್ವರಪ್ಪ ಕರೆ ನೀಡಿದ್ದರ ವಿರುದ್ಧ ವಕೀಲ ಧರ್ಮಪಾಲ್ ಖಾಸಗಿ ದೂರು ದಾಖಲಿಸಿದ್ದರು. ಬಿ.ಎಸ್.ಯಡಿಯೂರಪ್ಪ ಸಿಎಂ ಕುರ್ಚಿಯಿಂದ ಇಳಿದಾಗ ಕರ್ನಾಟಕ ಬಂದ್ಗೆ ಈಶ್ವರಪ್ಪ ಕರೆ ನೀಡಿದ್ದರು ಎನ್ನಲಾಗಿದೆ. ಈ ಹಿಂದೆ ಪ್ರಕರಣದ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಕೋರ್ಟ್ ನೊಟೀಸ್ ನೀಡಿತ್ತು. ಅನೇಕ ಬಾರಿ ನೊಟೀಸ್ ನೀಡಿದ್ದರೂ ಈಶ್ವರಪ್ಪ ಪ್ರತಿಕ್ರಿಯೆ ನೀಡಿಲ್ಲ. ಹೀಗಾಗಿ, ಸಿಟಿ ಸಿವಿಲ್ ಕೋರ್ಟ್ನ ವಿಶೇಷ ನ್ಯಾಯಾಲಯ ಸೋಮವಾರ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ.
Next Story