ಬ್ಯಾಂಕ್ ವಾರೆಂಟ್ ಪಡೆದ ರೈತರ ಹಿತ ಕಾಪಾಡಲು ಡಿಸಿಗೆ ಕುಮಾರಸ್ವಾಮಿ ಸೂಚನೆ
ಬೆಂಗಳೂರು, ನ. 4: ಕೃಷಿ ಸಾಲ ಪಡೆದ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಏಣಗಿ ಗ್ರಾಮದ ಐವರು ರೈತರಿಗೆ ಆ್ಯಕ್ಸಿಸ್ ಬ್ಯಾಂಕ್ ನ್ಯಾಯಾಲಯದ ಮೂಲಕ ಬಂಧನ ವಾರೆಂಟ್ ಹೊರಡಿಸಿದ ಹಿನ್ನೆಲೆಯಲ್ಲಿ ರೈತರ ಹಿತರಕ್ಷಣೆ ಮಾಡಬೇಕೆಂದು ಮುಖ್ಯಮಂತ್ರಿ ಕುಮಾರಸ್ವಾಮಿ, ಜಿಲ್ಲಾಧಿಕಾರಿಗೆ ಸೂಚಿಸಿದ್ದಾರೆ.
ಆ್ಯಕ್ಸಿಸ್ ಬ್ಯಾಂಕ್ ಕೋಲ್ಕತ್ತ ನ್ಯಾಯಾಲಯದಲ್ಲಿ ಬೆಳಗಾವಿ ಜಿಲ್ಲೆಯ ರೈತರ ಮೇಲೆ ಮೊಕದ್ದಮೆ ದಾಖಲಿಸಿ ನ್ಯಾಯಾಲಯ ಬಂಧನ ವಾರಂಟ್ ಹೊರಡಿಸಿದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿ ಜತೆ ದೂರವಾಣಿಯಲ್ಲಿ ಮಾತನಾಡಿದ ಸಿಎಂ, ರೈತರ ಹಿತ ಕಾಪಾಡಬೇಕೆಂದು ನಿರ್ದೇಶಿಸಲಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.
ರೈತರಿಗೆ ಬಂಧನ ವಾರೆಂಟ್ ಜಾರಿ ಸಂಬಂಧ ಈ ಪ್ರಕರಣಗಳ ಕುರಿತು ಸಂಪೂರ್ಣ ವರದಿ ಸಲ್ಲಿಸುವಂತೆ ಸೂಚಿಸಿದ್ದು, ಸಾಲಮನ್ನಾ ಯೋಜನೆ ವ್ಯಾಪ್ತಿಗೆ ಬರುವ ರೈತರು ಆತಂಕ ಪಡುವ ಅಗತ್ಯವಿಲ್ಲ. ಸರಕಾರ ನಿಮ್ಮ ಬೆಂಬಲಕ್ಕಿದೆ ಎಂದು ಕುಮಾರಸ್ವಾಮಿ ಟ್ವಿಟ್ಟರ್ ಮೂಲಕ ಭರವಸೆ ನೀಡಿದ್ದಾರೆ.
Next Story