ಖಾಸಗಿ ಬ್ಯಾಂಕ್ಗಳಿಂದ ರೈತರ ಶೋಷಣೆ ಸಹಿಸುವುದಿಲ್ಲ: ಮುಖ್ಯಮಂತ್ರಿ ಕುಮಾರಸ್ವಾಮಿ
ಬೆಂಗಳೂರು, ನ. 5: ಖಾಸಗಿ ವಲಯದ ಬ್ಯಾಂಕುಗಳು ರೈತರಿಗೆ ಕೃಷಿ ಸಾಲ ನೀಡುವ ವಿಚಾರದಲ್ಲಿ ರೈತರನ್ನು ಶೋಷಣೆಗೊಳಪಡಿಸಿದಲ್ಲಿ ಸರಕಾರ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಎಚ್ಚರಿಸಿದ್ದಾರೆ.
ಬೆಳಗಾವಿ ಜಿಲ್ಲೆಯ ರೈತರಿಗೆ ಆಕ್ಸಿಸ್ ಬ್ಯಾಂಕ್ ನ್ಯಾಯಾಲಯದ ಮೂಲಕ ಬಂಧನ ವಾರಂಟ್ ಹೊರಡಿಸಿರುವ ಹಿನ್ನೆಲೆಯಲ್ಲಿ ಕಾನೂನು ತಜ್ಞರಿಂದ ಮಾಹಿತಿ ಪಡೆದಿದ್ದು, ಕೃಷಿ ಸಾಲದ ಹೆಸರಿನಲ್ಲಿ ಸಾಲ ನೀಡಿದಲ್ಲಿ ಅಂತಹ ರೈತರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಸಾಧ್ಯವಾಗದು. ಈ ಹಿನ್ನೆಲೆಯಲ್ಲಿ ಆಕ್ಸಿಸ್ ಬ್ಯಾಂಕ್ ಕೃಷಿ ಸಾಲದ ಹೆಸರಿನಲ್ಲಿ ರೈತರಿಗೆ ಶೋಷಣೆ ಮಾಡಿದಲ್ಲಿ ಅದನ್ನು ಗಂಭೀರವಾಗಿ ಪರಿಗಣಿಸುವಂತೆ ಸೂಚಿಸಿದ್ದು, ಆಕ್ಸಿಸ್ ಬ್ಯಾಂಕ್ ಹಾಗೂ ರೈತರೊಂದಿಗೆ ನಡೆಯಲಿರುವ ಸಭೆಯಲ್ಲಿ ರೈತರ ಹಿತರಕ್ಷಣೆಗೆ ಬದ್ಧವಾಗಿರುವ ಸೂತ್ರವನ್ನು ಕಂಡುಹಿಡಿಯುವಂತೆ ಜಿಲ್ಲಾಧಿಕಾರಿಗೆ ಸಿಎಂ ಸೂಚಿಸಿದ್ದಾರೆ.
Next Story