ಬೆಂಗಳೂರು: ನೇಣು ಬಿಗಿದು ಆತ್ಮಹತ್ಯೆ
ಬೆಂಗಳೂರು, ನ.5: ವ್ಯಕ್ತಿಯೊಬ್ಬ ಮನೆ ಮುಂಭಾಗ ಹಾಕಿದ್ದ ಕೇಬಲ್ ವೈರ್ನಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಇಲ್ಲಿನ ಚಂದ್ರಾಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾಗಿದೆ.
ನಗರದ ವಿಶ್ವಭಾರತಿ 4ನೆ ಮುಖ್ಯ ರಸ್ತೆಯ ಮೋಹನ್(40) ಎಂಬುವರು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ.
ಗಾರ್ಮೆಂಟ್ಸ್ನಲ್ಲಿ ಕೆಲಸಕ್ಕೆ ಹೋಗುತ್ತಿದ್ದ ಮೋಹನ್ ಅವರಿಗೆ ವಧು ಸಿಗದೆ ವಿವಾಹವಾಗಿರಲಿಲ್ಲ. ಇದರಿಂದ ನೊಂದು ರವಿವಾರ ರಾತ್ರಿ 7:30ರ ಸುಮಾರಿಗೆ ಮನೆಯಿಂದ ಹೊರ ಬಂದು ಕೇಬಲ್ ವೈರ್ನಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಮೊಕದ್ದಮೆ ದಾಖಲಿಸಿಕೊಂಡಿರುವ ಚಂದ್ರಾಲೇಔಟ್ ಠಾಣಾ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
Next Story