ಟಿಪ್ಪು ಜಯಂತಿ: ಖಾಸಗಿ ಆಚರಣೆಗೆ ಅವಕಾಶ ನೀಡಲು ಒತ್ತಾಯ
ಕಲಬುರ್ಗಿ, ನ.8: ಸರಕಾರದ ವತಿಯ ಟಿಪ್ಪು ಜಯಂತಿ ಆಚರಣೆಗೆ ಬಿಜೆಪಿ ವಿರೋಧಿಸುತ್ತಿದೆ ಎಂಬ ಕಾರಣಕ್ಕಾಗಿ ಖಾಸಗಿ ಆಚರಣೆಗೆ ಅವಕಾಶ ನೀಡದಿರುವುದು ಖಂಡನೀಯ. ನ. 10 ರಂದು ನಡೆಯಲಿರುವ ಟಿಪ್ಪು ಜಯಂತಿ ಖಾಸಗಿ ಆಚರಣೆಗೆ ಅವಕಾಶ ನೀಡಬೇಕೆಂದು ಟಿಪ್ಪು ಸೌಹಾರ್ದ ವೇದಿಕೆ ಅಧ್ಯಕ್ಷ ಶೌಕತ್ ಅಲಿ ಆಲೂರು ಒತ್ತಾಯಿಸಿದರು.
ನಗರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದ ಮೊದಲ ಸ್ವಾತಂತ್ರ ಹೋರಾಟಗಾರ ಟಿಪ್ಪು ಸುಲ್ತಾನ್ ದೇಶದ ಹೆಮ್ಮೆಯ ಪ್ರತೀಕ. ಅವರ ಆದರ್ಶಗಳು ಅನುಕರಣೀಯವಾದದ್ದು. ಹೀಗಾಗಿ ಟಿಪ್ಪು ಜಯಂತಿಯನ್ನು ಯಾರು ವಿರೋಧಿಸಬಾರದು ಎಂದು ಮನವಿ ಮಾಡಿದರು.
ರಾಜ್ಯ ಸರಕಾರ ಟಿಪ್ಪು ಜಯಂತಿ ಆಚರಿಸಲು ಆದೇಶಿಸಿರುವುದು ಸ್ವಾಗತಾರ್ಹ ಕ್ರಮವಾಗಿದೆ. ಅದೇ ಮಾದರಿಯಲ್ಲಿ ಖಾಸಗಿ ಸಂಘ, ಸಂಸ್ಥೆಗಳು ಟಿಪ್ಪು ಜಯಂತಿ ಆಚರಣೆಗೆ ಅವಕಾಶ ನೀಡಬೇಕು. ಯಾವ ಕಾರಣಕ್ಕೂ ನಿರ್ಬಂಧ ಹೇರಬಾರದು ಎಂದು ಅವರು ತಿಳಿಸಿದರು.
Next Story