ಆ್ಯಂಬಿಡೆಂಟ್ ಡೀಲ್ ಪ್ರಕರಣ: ರಿಟ್ ಅರ್ಜಿ ಹಿಂಪಡೆದ ಬ್ರಿಜೇಶ್ ರೆಡ್ಡಿ
ಬೆಂಗಳೂರು, ನ.15: ಆ್ಯಂಬಿಡೆಂಟ್ ಡೀಲ್ ಪ್ರಕರಣ ಸಂಬಂಧ ವಿಚಾರಣೆಗೆ ಕರೆದೊಯ್ದಾಗ ಸಿಸಿಬಿ ಪೊಲೀಸರು ಕಿರುಕುಳ ನೀಡಿದ್ದರು ಎಂದು ಆರೋಪಿಸಿ ಉದ್ಯಮಿ ಬ್ರಿಜೇಶ್ರೆಡ್ಡಿ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ವಾಪಸ್ ಪಡೆದಿದ್ದಾರೆ.
ಆ್ಯಂಬಿಡೆಂಟ್ ಡೀಲ್ ಪ್ರಕರಣ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಬ್ರಿಜೇಶ್ ಅವರನ್ನು ವಿಚಾರಣೆಗೆ ಕರೆದಿದ್ದರು. ಈ ವೇಳೆ ಪೊಲೀಸರು ಕಿರುಕುಳ ನೀಡಿದ್ದರು ಎಂದು ಹೈಕೋರ್ಟ್ಗೆ ಬ್ರಿಜೇಶ್ ರಿಟ್ ಅರ್ಜಿ ಸಲ್ಲಿಸಿದ್ದರು.
Next Story