ತುಮಕೂರು ಮಾಜಿ ಮೇಯರ್ ಹತ್ಯೆ ಪ್ರಕರಣ: ಮತ್ತೊಬ್ಬ ಸಿಸಿಬಿ ವಶಕ್ಕೆ
ಬೆಂಗಳೂರು, ನ.17: ತುಮಕೂರು ಮಾಜಿ ಮೇಯರ್ ರವಿಕುಮಾರ್ ಹತ್ಯೆ ಪ್ರಕರಣ ಸಂಬಂಧ ಮತ್ತೊಬ್ಬ ಆರೋಪಿಯನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಲಕ್ಷ್ಮೀ ನಾರಾಯಣ ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದುಬಂದಿದೆ.
ಕಳೆದ ಸೆ.30ರಂದು ತುಮಕೂರಿನಲ್ಲಿ ಮಾಜಿ ಮೇಯರ್ ರವಿಕುಮಾರ್ ಅವರ ಕೊಲೆಯಾಗಿತ್ತು. ಈ ಪ್ರಕರಣ ಸಂಬಂಧ ಈಗಾಗಲೇ ಸುಜಯ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ರವಿಕುಮಾರ್ ಕೊಲೆಯಾಗುವ ಮುನ್ನ ಸುಜಯ್ ಹಾಗೂ ಲಕ್ಷ್ಮೀ ನಾರಾಯಣ ಜೊತೆ ಡಾಬಾದಲ್ಲಿ ಮಾತುಕತೆ ನಡೆಸಿದ್ದ ವಿಡಿಯೊ ವೈರಲ್ ಆಗಿತ್ತು. ಈ ಹಿನ್ನೆಲೆಯಲ್ಲಿ ಲಕ್ಷ್ಮೀ ನಾರಾಯಣ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.
Next Story