ಬೆಂಗಳೂರು: ಬಾಲಕರನ್ನು ಬಿಟ್ಟು ಕಳ್ಳತನ ಮಾಡಿಸುತ್ತಿದ್ದ ವ್ಯಕ್ತಿಯ ಬಂಧನ
ಬೆಂಗಳೂರು, ನ.18: ಅಪ್ರಾಪ್ತ ಬಾಲಕರನ್ನು ಬಿಟ್ಟು ಮನೆಗಳ್ಳತನ ಮಾಡಿಸುತ್ತಿದ್ದ ಆರೋಪದಡಿ ವ್ಯಕ್ತಿಯೊಬ್ಬನನ್ನು ಇಲ್ಲಿನ ಜೀವನ್ ಭೀಮಾನಗರ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ.
ಪುಟ್ಟರಾಜು ಬಂಧಿತ ಆರೋಪಿ ಎಂದು ತಿಳಿದುಬಂದಿದೆ. ಈತ ಅಪ್ರಾಪ್ತ ಬಾಲಕರಿಗೆ ಮಾದಕ ವಸ್ತುಗಳ ಆಸೆ ತೋರಿಸಿ ನಗರದ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮನೆಗಳ್ಳತನ ಮಾಡುವಂತೆ ಸೂಚಿಸುತ್ತಿದ್ದ ಎನ್ನಲಾಗಿದೆ.
ಸಿಸಿಟಿವಿಯಲ್ಲಿ ಆರೋಪಿಗಳ ಕೃತ್ಯ ಸೆರೆಯಾಗಿದ್ದು, ಆರೋಪಿಯನ್ನ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಪುಟ್ಟರಾಜು, 10 ಕ್ಕೂ ಹೆಚ್ಚು ಅಪ್ತಾಪ್ತ ಬಾಲಕರ ತಂಡ ಕಟ್ಟಿಕೊಂಡಿದ್ದ ಎನ್ನುವ ಮಾಹಿತಿ ವಿಚಾರಣೆಯಲ್ಲಿ ಬೆಳಕಿಗೆ ಬಂದಿದ್ದು, ಈ ಸಂಬಂಧ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
Next Story