ರೈತರಿಗೆ ನ್ಯಾಯ ದೊರಕಿಸಿಕೊಡಲು ಬದ್ಧ: ಮಾಜಿ ಸಚಿವ ಸತೀಶ್ ಜಾರಕಿಹೊಳಿ
ಬೆಳಗಾವಿ, ನ. 21: ಕಬ್ಬು ಬೆಳೆಗಾರರೂ ಮತ್ತು ಸಕ್ಕರೆ ಕಾರ್ಖಾನೆಗಳೂ ಉಳಿಯಬೇಕು. ಆ ನಿಟ್ಟಿನಲ್ಲಿ ಮೈತ್ರಿ ಸರಕಾರ ರೈತರ ಸಮಸ್ಯೆಗಳನ್ನು ಆಲಿಸಿ ಅವರಿಗೆ ನ್ಯಾಯ ದೊರಕಿಸಿಕೊಡಲಿದೆ ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ ಭರವಸೆ ವ್ಯಕ್ತಪಡಿಸಿದ್ದಾರೆ.
ಬುಧವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ನಾಳೆ(ನ.22) ನಡೆಯಲಿರುವ ಸಕ್ಕರೆ ಕಾರ್ಖಾನೆಗಳ ಮಾಲಕರ ಸಭೆಯಲ್ಲಿ ನಾನೂ ಪಾಲ್ಗೊಳ್ಳಲಿದ್ದೇನೆ ಎಂದು ಇದೇ ವೇಳೆ ಸ್ಪಷ್ಟಪಡಿಸಿದರು.
ರೈತರ ಜೊತೆಗೆ ಸಕ್ಕರೆ ಬೆಲೆ ಕುಸಿತದ ಹಿನ್ನೆಲೆಯಲ್ಲಿ ಕಾರ್ಖಾನೆಗಳ ಮಾಲಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೀಗಾಗಿ ನಾಳಿನ ಸಭೆಯಲ್ಲಿ ಸಕ್ಕರೆ ಕಾರ್ಖಾನೆಗಳ ಮಾಲಕರ ವಿವಿಧ ಬೇಡಿಕೆಗಳ ಬಗ್ಗೆ ಚರ್ಚಿಸಲಾಗುವುವುದು ಎಂದು ಸತೀಶ್ ಜಾರಕಿಹೊಳಿ ಹೇಳಿದರು.
Next Story