ರಾಜ್ಯದಲ್ಲಿ ಬರ ಛಾಯೆ: ಸಮರ್ಪಕವಾಗಿ ಪರಿಸ್ಥಿತಿ ನಿಭಾಯಿಸಲು ಡಿಸಿಎಂ ಸೂಚನೆ
ಬೆಂಗಳೂರು, ನ.27: ರಾಜ್ಯದಲ್ಲಿ ಬರಗಾಲದ ಛಾಯೆ ಆವರಿಸಿದ್ದು, ಪರಿಸ್ಥಿತಿಯನ್ನು ಸಮರ್ಪಕವಾಗಿ ನಿಭಾಯಿಸುವಂತೆ ಅಧಿಕಾರಿಗಳಿಗೆ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಸೂಚಿಸಿದ್ದಾರೆ.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿಂದು ಕರೆದಿದ್ದ ಜಿಲ್ಲಾಧಿಕಾರಗಳ ಹಾಗೂ ಸಿಇಒಗಳ ಸಭೆಯಲ್ಲಿ ಮಾತನಾಡಿದ ಅವರು, ಕೊಡಗು ನೆರೆ ಸ್ಥಿತಿಯಿಂದ ಒಟ್ಟು 4 ಸಾವಿರ ಕೋಟಿ ರೂ. ನಷ್ಟ ಉಂಟಾಗಿದೆ. ಇದರಲ್ಲಿ 546 ಕೋಟಿ ರೂ. ಮಾತ್ರ ಕೇಂದ್ರ ನೀಡಿದೆ. ಸದ್ಯ ರಾಜ್ಯದಲ್ಲಿ 100 ತಾಲೂಕುಗಳಲ್ಲಿ ಬರಗಾಲ ಎಂದು ಘೋಷಿಸಲಾಗಿದೆ. ಇನ್ನು ಕೆಲ ತಾಲೂಕುಗಳು ಬರಪೀಡಿತ ಪಟ್ಟಿಗೆ ಸೇರಲಿವೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಪರಿಸ್ಥಿತಿಯನ್ನು ಸಮರ್ಪಕವಾಗಿ ನಿಭಾಯಿಸಲು ಕ್ರಮ ಕೈಗೊಳ್ಳಬೇಕು ಎಂದು ಸಲಹೆ ನೀಡಿದರು.
ಜನಸಾಮಾನ್ಯರು ವಿಧಾನಸೌಧಕ್ಕೇ ಬರುವುದನ್ನು ತಪ್ಪಿಸಿ ಜಿಲ್ಲಾಧಿಕಾರಿಗಳೇ ಅವರ ಸಮಸ್ಯೆ ಆಲಿಸಬೇಕು ಎಂದರು.
Next Story