ವಿಶ್ವ ವಿಕಲಚೇತನರ ದಿನಾಚರಣೆ: ಸಾಧಕ ವಿಕಲಚೇತನರಿಗೆ ಸಿಎಂ ಸನ್ಮಾನ
ಬೆಂಗಳೂರು, ಡಿ.3: ವಿಶ್ವ ವಿಕಲಚೇತನರ ದಿನಾಚರಣೆಯ ಅಂಗವಾಗಿ ಫ್ರೀಡಂ ಪಾರ್ಕಿನಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ವಿಕಲಚೇತನ ವ್ಯಕ್ತಿಗಳು ಮುಖ್ಯಮಂತ್ರಿಗೆ ತಮ್ಮ ಅಹವಾಲು ಸಲ್ಲಿಸಿದರು.
ಇದೇ ಸಂದರ್ಭ ವಿಕಲಚೇತನ ಸಾಧಕರನ್ನು ಮುಖ್ಯಮಂತ್ರಿ ಸನ್ಮಾನಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರು ಮತ್ತು ಹಿರಿಯ ನಾಗರಿಕರ ಕಲ್ಯಾಣ ಇಲಾಖೆ ಸಚಿವೆ ಡಾ.ಜಯಮಾಲಾ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮತ್ತಿತರರು ಉಪಸ್ಥಿತರಿದ್ದರು.
Next Story