ಕುದುರೆ ರೇಸ್ ಅಡ್ಡೆ ಮೇಲೆ ಸಿಸಿಬಿ ಪೊಲೀಸರಿಂದ ದಾಳಿ: 10 ಜನರ ಬಂಧನ
ಬೆಂಗಳೂರು, ಡಿ.7: ಕುದುರೆ ರೇಸ್ ಜೂಜಾಟದ ಅಡ್ಡೆಯ ಮೇಲೆ ದಾಳಿ ನಡೆಸಿರುವ ಸಿಸಿಬಿ ಪೊಲೀಸರು, 10 ಜನರನ್ನು ಬಂಧಿಸಿ 5.91 ಲಕ್ಷ ರೂ. ನಗದು ಜಪ್ತಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
ನಗರದ ನಿವಾಸಿಗಳಾದ ಜ್ಯೋತಿ, ಅಂಜಿನಪ್ಪವಿನೋದ್, ಹರೀಶ್ ತಿಮ್ಮರಾಜು ಸೇರಿದಂತೆ 10 ಜನ ಬಂಧಿತ ಆರೋಪಿಗಳೆಂದು ಸಿಸಿಬಿ ಪೊಲೀಸರು ತಿಳಿಸಿದ್ದಾರೆ.
ನಗರದ ರೇಸ್ ಕೋರ್ಸ್ ರಸ್ತೆಯಲ್ಲಿರುವ ಟರ್ಫ್ ಕ್ಲಬ್ನ ಗೇಟ್ ನಂ.3, 1ನೇ ಎನ್ಕ್ಲೋಸರ್ಸ್ ಒಳಗಡೆ ಅಪರಿಚಿತ ಆಸಾಮಿಗಳು ಅನಧಿಕೃತವಾಗಿ ಯಾವುದೇ ಪರವಾನಗಿ ಇಲ್ಲದೇ ಕುದುರೆಗಳ ರೇಸ್ ಜೂಜಾಟ ಆಡುತ್ತಿದ್ದಾರೆಂಬ ಮಾಹಿತಿ ಸಂಗ್ರಹಿಸಿ ಸಿಸಿಬಿ ಪೊಲೀಸರು ದಾಳಿ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.
ಬಂಧಿತರಿಂದ 5.91 ಲಕ್ಷ ರೂ. ಮೌಲ್ಯದ ನಗದು ವಶಕ್ಕೆ ಪಡೆಯಲಾಗಿದ್ದು, ಈ ಸಂಬಂಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಿಸಲಾಗಿದೆ ಎಂದು ಸಿಸಿಬಿ ಹೇಳಿದೆ.
Next Story