ಸದನದ ಗೌರವ ಎತ್ತಿ ಹಿಡಿಯುವೆ: ನೂತನ ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ
ಬೆಳಗಾವಿ, , ಡಿ.11: ವಿಧಾನ ಪರಿಷತ್ತಿನ ಸದನದ ಗೌರವನ್ನು ಎತ್ತಿ ಹಿಡಿದು, ಎಲ್ಲರಿಗೂ ನ್ಯಾಯ ಒದಗಿಸಲು ಪ್ರಮಾಣಿಕ ಪ್ರಯತ್ನ ಮಾಡುವೆ ಎಂದು ನೂತನ ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ ನುಡಿದರು.
ಬುಧವಾರ ಸುವರ್ಣ ಸೌಧದ ಪರಿಷತ್ತಿನಲ್ಲಿ ಅಧಿಕಾರ ಸ್ವೀಕರಿಸಿದ ಬಳಿಕ, ಸದಸ್ಯರನ್ನುದ್ದೇಶಿಸಿ ಮಾತನಾಡಿದ ಅವರು, ಸಭಾಪತಿ ಸ್ಥಾನಕ್ಕೆ ಲಾಭಿ ನಡೆಸಿಲ್ಲ. ನಿನ್ನೆಯವರೆಗೂ ಈ ಬಗ್ಗೆ ಮಾಹಿತಿಯೂ ಇರಲಿಲ್ಲ. ಏಕಾಏಕಿ ಈ ಭಾಗ್ಯ ದೊರೆತಿದೆ. ಆದರೆ, ಪ್ರಾಮಾಣಿಕವಾಗಿ ಸದನ ನಡೆಯುವಂತೆ ಪ್ರಯತ್ನ ಮಾಡುತ್ತೇನೆ ಎಂದು ಹೇಳಿದರು.
ರಾಜ್ಯದ ಪರಿಷತ್ ಸದನವು ಇತಿಹಾಸ ಹೊಂದಿದೆ. ಈ ಸಭಾಪತಿ ಸ್ಥಾನಕ್ಕೆ ಆಯ್ಕೆ ಮಾಡಿದ ಕಾಂಗ್ರೆಸ್ ನ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಆಸ್ಕರ್ ಫೆರ್ನಾಂಡಿಸ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಪ್ರಮುಖರಿಗೆ ಅಭಿನಂದನೆ ಸಲ್ಲಿಸಿದರು
Next Story