ಸಮ್ಮಿಶ್ರ ಸರಕಾರ ಐದು ವರ್ಷ ಪೂರ್ಣ ಆಡಳಿತ ನಡೆಸುತ್ತದೆ: ಸಚಿವ ಶಿವಳ್ಳಿ
ಕೊಪ್ಪಳ, ಜ.12: ಪಿಎ ಮಾಡಿದ ಕೆಲಸಕ್ಕೆ ಸಚಿವರು ಏನು ಮಾಡಬೇಕು ಎಂದು ಪೌರಾಡಳಿತ ಸಚಿವ ಸಿ.ಎಸ್. ಶಿವಳ್ಳಿ ಸಚಿವ ಪುಟ್ಟರಂಗಶೆಟ್ಟಿ ಪರ ಬ್ಯಾಟ್ ಮಾಡಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಿಎ ಮಾಡಿದ ಕೆಲಸಕ್ಕೆ ಸಚಿವರು ಏನು ಮಾಡಲು ಸಾಧ್ಯ. ಈಗ ಪ್ರಕರಣ ಕುರಿತಂತೆ ತನಿಖೆ ನಡೆಯುತ್ತಿದ್ದು, ಸತ್ಯ ಗೊತ್ತಾಗಲಿದೆ. ತಪ್ಪಿತಸ್ಥರ ಮೇಲೆ ಕ್ರಮ ಜರುಗಿಸಲಾಗುತ್ತದೆ. ಅನಗತ್ಯವಾಗಿ ಗೊಂದಲ ಸೃಷ್ಟಿಸಲಾಗುತ್ತಿದೆ ಎಂದರು.
ಬಿಜೆಪಿಯವರು ಸರಕಾರ ಬೀಳುತ್ತೆ ಎಂದು ಕಳೆದ 6 ತಿಂಗಳಿಂದ ಹೇಳುತ್ತಲೇ ಇದ್ದಾರೆ. ಇಂದು ಬೀಳುತ್ತೆ, ನಾಳೆ ಬೀಳುತ್ತೆ, 24 ಗಂಟೆಯಲ್ಲಿ ಸರಕಾರ ಬೀಳುತ್ತೆ ಎಂದು ಹೇಳುತ್ತಿದ್ದಾರೆ. ಆದರೆ, ಇದುವರೆಗೂ ಸರಕಾರ ಬೀಳಿಸಲು ಸಾಧ್ಯವಾಗಲಿಲ್ಲ ಎಂದ ಅವರು, ರಾಜ್ಯದಲ್ಲಿ ಸಮ್ಮಿಶ್ರ ಸರಕಾರ ಐದು ವರ್ಷವೂ ಪೂರ್ಣ ಆಡಳಿತ ನಡೆಸುತ್ತದೆ. ಈಗ ಮರಳಿ ಚುನಾವಣೆಗೆ ಹೋಗಲು ಯಾವ ಶಾಸಕರೂ ತಯಾರಿಲ್ಲ ಎಂದು ಸಚಿವರು ಹೇಳಿದರು.
Next Story