ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ
ಬೆಂಗಳೂರು, ಜ.12: ಕೆಆರ್ ಪುರಂನ ನಿಸರ್ಗ ಲೇಔಟ್ನ ರಾಜು(40) ಎಂಬುವರು ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಕೆಲಸಕ್ಕೆ ಹೋಗಿದ್ದ ರಾಜು ಶನಿವಾರ ಸಂಜೆ ಕೆಲಸ ಮುಗಿಸಿಕೊಂಡು ಬಂದು ರಾತ್ರಿ ಮನೆಯವರು ಹೊರ ಹೋಗಿದ್ದ ವೇಳೆ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಸಂಬಂಧ ಕೆಆರ್ಪುರಂ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Next Story