ಬಿಜೆಪಿ ಮಾಡುತ್ತಿರುವ ಕೆಲಸ ಅಸಹ್ಯ ಹುಟ್ಟಿಸುತ್ತಿದೆ: ಎಚ್.ಡಿ.ದೇವೇಗೌಡ
ಬೆಂಗಳೂರು, ಜ.15: ರಾಷ್ಟ್ರೀಯ ಪಕ್ಷವಾಗಿ ಬಿಜೆಪಿ ಮಾಡುತ್ತಿರುವ ಕೆಲಸ ನಿಜಕ್ಕೂ ಅಸಹ್ಯವಾಗಿದೆ. ತಮ್ಮ ಶಾಸಕರನ್ನು ಕೂಡಿ ಹಾಕಿಕೊಳ್ಳೋದು ಅಸಹ್ಯ ತರಿಸುತ್ತಿದೆ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಹೇಳಿದ್ದಾರೆ.
ಮಂಗಳವಾರ ಆಪರೇಷನ್ ಕಮಲ ವಿಚಾರವಾಗಿ ಪದ್ಮನಾಭನಗರದಲ್ಲಿರುವ ನಿವಾಸದಲ್ಲಿ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪರಿಗೆ ಭ್ರಮೆ ಇದ್ದಂತಿದೆ. ಆದರೆ, ಮೈತ್ರಿ ಸರಕಾರಕ್ಕೆ ಏನೂ ಆಗುವುದಿಲ್ಲ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಬೆಂಗಳೂರಿಗೆ ಆಗಮಿಸಿದ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಆಪರೇಷನ್ ಕಮಲದ ವಿಚಾರವಾಗಿ ಮಾಧ್ಯಮದಲ್ಲಿ ಸುದ್ದಿ ಪ್ರಸಾರವಾದ ಹಿನ್ನೆಲೆಯಲ್ಲಿ ಆತಂಕದಿಂದ ಬಂದಿದ್ದಾರೆ ಎಂದು ಹೇಳಿದರು.
Next Story