ಹೊಟೇಲ್ ಕಾಯುವ ಚೌಕಿದಾರ್ ಮೋದಿ: ಪ್ರಧಾನಿಯನ್ನು ಟೀಕಿಸಿದ ಸಿದ್ದರಾಮಯ್ಯ
ಬೆಂಗಳೂರು, ಜ.15: ಆಪರೇಷನ್ ಕಮಲ ಮಾಡಲು ಹೊರಟಿರುವ ಬಿಜೆಪಿ ನಾಯಕರ ನಡೆಯನ್ನು ಟೀಕಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ತಮ್ಮ ಟ್ವಿಟ್ಟರ್ನಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಮಂಗಳವಾರ ಸರಣಿ ಟ್ವಿಟ್ ಮಾಡಿರುವ ಸಿದ್ದರಾಮಯ್ಯ, ಚೌಕಿದಾರ್ ಪ್ರಧಾನಿ ನರೇಂದ್ರ ಮೋದಿ ಅವರೇ, ನಿಮ್ಮನ್ನು ದೇಶದ ಚೌಕಿದಾರ್ ಎಂದು ಹೇಳಿಕೊಳ್ತೀರಿ. ಈಗ ನಮ್ಮ ರಾಜ್ಯದ ಶಾಸಕರನ್ನು ಹೊಟೇಲ್ ಕೋಣೆಗಳಲ್ಲಿ ಕೂಡಿ ಹಾಕಿ ಕಾಯುತ್ತಿರುವ ಚೌಕಿದಾರ್ ಆಗಿಬಿಟ್ಟಿರಲ್ಲಾ.. ಎಂದು ಟೀಕಿಸಿದ್ದಾರೆ.
ಅದೇ ರೀತಿ, ಮತ್ತೊಂದು ಟ್ವಿಟ್ನಲ್ಲಿ, ‘ಸಾಫ್ ನೀಯತ್, ಸಹೀ ವಿಕಾಸ್ ಬದಲಾಗಿ ಗಂಧಾ ನೀಯತ್, ರೆಸಾರ್ಟ್ ವಿಕಾಸ್’ ಎಂದು ಅವರು ಹೇಳಿದ್ದಾರೆ.
Next Story