ರೆಸಾರ್ಟ್ನಲ್ಲಿರುವ ಬಿಜೆಪಿ ಶಾಸಕರು ಜನರ ಬಳಿಗೆ ಹೋಗಿ ಕಷ್ಟಗಳನ್ನು ಆಲಿಸಲಿ: ಸಿಎಂ ಕುಮಾರಸ್ವಾಮಿ
ಬೆಂಗಳೂರು, ಜ. 18: ಹರಿಯಾಣದ ಗುರುಗ್ರಾಮದ ರೆಸಾರ್ಟ್ನಲ್ಲಿ ನಾಲ್ಕೈದು ದಿನಗಳಿಂದ ವಿಶ್ರಾಂತಿ ಪಡೆಯುತ್ತಿರುವ ಬಿಜೆಪಿ ಶಾಸಕರು ಜನರ ಬಳಿಗೆ ಹೋಗಿ ಅವರ ಕಷ್ಟಗಳನ್ನು ಆಲಿಸಲಿ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.
ಶುಕ್ರವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಅಯ್ಯೋ ಪಾಪ.. ಬಿಜೆಪಿ ಶಾಸಕರು ರೆಸಾರ್ಟ್ನಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಇಂದು ರಾಜ್ಯಕ್ಕೆ ಆಗಮಿಸಬೇಕಿತ್ತು. ಯಾವ ಕಾರಣಕ್ಕಾಗಿ ಬಂದಿಲ್ಲ ಎಂಬುದು ನನಗೂ ತಿಳಿದಿಲ್ಲ. ಕಡೇ ಪಕ್ಷ ನಾಳೆಯಾದರೂ ಬರಬಹುದೆಂಬ ನಿರೀಕ್ಷೆ ಇದೆ ಎಂದು ಲೇವಡಿ ಮಾಡಿದರು.
ಇನ್ನು ಮುಂದಾದರೂ ತಮ್ಮ-ತಮ್ಮ ಕ್ಷೇತ್ರಗಳಿಗೆ ತೆರಳಿ ಅಲ್ಲಿನ ಜನರ ಸಮಸ್ಯೆಗಳನ್ನು ಕೇಳಲಿ. ಬಿಜೆಪಿ ಶಾಸಕರು ರೆಸಾರ್ಟ್ನಿಂದ ಬರಬಹುದು ಎಂದು ರಾಜ್ಯಾಧ್ಯಕ್ಷ ಯಡಿಯೂರಪ್ಪನವರೇ ಹೇಳಿದ್ದಾರೆ. ಈಗಲಾದರೂ ಬರುವ ಮನಸ್ಸು ಮಾಡಿರುವುದು ಸಂತೋಷ ಎಂದು ವ್ಯಂಗ್ಯವಾಡಿದರು.
Next Story