ಸಿದ್ದಗಂಗಾ ಶ್ರೀ ಬೇಗ ಗುಣಮುಖರಾಗಲಿ: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ
ಬೆಂಗಳೂರು, ಜ. 18: ‘ತ್ರಿವಿಧ ದಾಸೋಹಿ, ನಡೆದಾಡುವ ದೇವರು, ಸಿದ್ದಗಂಗಾ ಮಠದ ಡಾ.ಶಿವಕುಮಾರ ಶ್ರೀಗಳು ಅನಾರೋಗ್ಯದಿಂದ ಬಳಲುತ್ತಿರುವುದು ಅತೀವ ನೋವನ್ನುಂಟು ಮಾಡಿದೆ. ಶ್ರೀಗಳು ಬೇಗ ಗುಣಮುಖರಾಗಲಿ’ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪ್ರಾರ್ಥಿಸಿದ್ದಾರೆ.
ರಾಹುಲ್ ಗಾಂಧಿ ಅವರು ತಮ್ಮ ಫೇಸ್ಬುಕ್ ಖಾತೆಯ ಮೂಲಕ ಕನ್ನಡದಲ್ಲಿಯೇ ‘ಬಸವ ತತ್ವಗಳಿಗೆ ಜೀವ ತುಂಬಿದ ತ್ರಿವಿಧ (ಅನ್ನ/ಅಕ್ಷರ/ಜ್ಞಾನ) ದಾಸೋಹಿ, ಅಸಂಖ್ಯ ಭಕ್ತರ ಬದುಕಿನ ಬೆಳಕು ನಡೆದಾಡುವ ದೇವರು, ಶತಾಯುಷಿ ಡಾ.ಶಿವಕುಮಾರ ಸ್ವಾಮೀಜಿಗಳ ದರ್ಶನ ಮಾಡಿ ಆಶೀರ್ವಾದ ಪಡೆದಿದ್ದೆ’ ಎಂದು ಸ್ಮರಿಸಿದ್ದಾರೆ.
Next Story