ಜ.20: ದೊರೆಸ್ವಾಮಿ ಕುರಿತ ಸಾಕ್ಷ್ಯಚಿತ್ರ ಬಿಡುಗಡೆ
ಬೆಂಗಳೂರು, ಜ.18: ಕಲಾಬಂಧು ಫೌಂಡೇಷನ್ ವತಿಯಿಂದ ಜ.20 ರಂದು ಸಂಜೆ 5.30 ಕ್ಕೆ ಗಾಂಧಿ ಭವನದಲ್ಲಿ ಹಿರಿಯ ಸ್ವಾತಂತ್ರ ಹೋರಾಟಗಾರ ಡಾ.ಎಚ್.ಎಸ್.ದೊರೆಸ್ವಾಮಿಯವರ ಜೀವಿತ ಹಾಗೂ ಸಾಧನೆ ಕುರಿತಾದ ಸಾಕ್ಷ್ಯಚಿತ್ರದ ಸಿ.ಡಿ ಬಿಡುಗಡೆ ಸಮಾರಂಭವನ್ನು ಆಯೋಜಿಸಲಾಗಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಫೌಂಡೇಷನ್ ಅಧ್ಯಕ್ಷ ಎಚ್.ನರಸಿಂಹರಾಜು, ಡಾ.ಎಚ್.ಎಸ್.ದೊರೆಸ್ವಾಮಿಯವರ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಅಂದು ಮಧ್ಯಾಹ್ನ 3.ಗಂಟೆಗೆ ಏರ್ಪಡಿಸಲಾಗಿದೆ. ಬೆಳಗ್ಗೆ 10 ಗಂಟೆಯಿಂದ 3 ಗಂಟೆಯ ವರೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿದ್ದು, ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಸಾಧಕರನ್ನು ಗುರುತಿಸಿ ಕಲಾಬಂಧು ವಾರ್ಷಿಕ ಪ್ರಶಸ್ತಿ ನೀಡಲಾಗುವುದು ಎಂದು ತಿಳಿಸಿದರು.
ಶಾಸಕ ಎ.ಟಿ.ರಾಮಸ್ವಾಮಿ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಲಿದ್ದು, ಹಾವೇರಿಯ ಅಕ್ಕಿಮಠದ ಮ.ನಿ.ಪ್ರ ಗುರುಲಿಂಗ ಸ್ವಾಮಿ ದಿವ್ಯ ಸಾನಿಧ್ಯ ವಹಿಸಲಿದ್ದಾರೆ. ಲೋಕಸಭಾ ಸದಸ್ಯ ವಿ.ಎಸ್.ಉಗ್ರಪ್ಪ ಉದ್ಘಾಟನೆ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮೇಯರ್ ಗಂಗಾಬಿಕೆ ಹಾಗೂ ಜೆಡಿಎಸ್ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಝಪ್ರುಲ್ಲಾ ಖಾನ್ ಪಾಲ್ಗೊಳ್ಳಲಿದ್ದಾರೆ ಎಂದರು.