ಪೊಲೀಸ್ ಆಯುಕ್ತರ ಕಚೇರಿಗೆ ಆಗಮಿಸಿದ ನಟ ಅರ್ಜುನ್ ಸರ್ಜಾ
ಬೆಂಗಳೂರು, ಜ.21: ಬಹುಭಾಷಾ ನಟ ಅರ್ಜುನ್ ಸರ್ಜಾ ಅವರು ದಿಢೀರ್ ಸೋಮವಾರ ನಗರದ ಪೊಲೀಸ್ ಆಯುಕ್ತರ ಕಚೇರಿಗೆ ಆಗಮಿಸಿದರು.
ನಗರದ ಕನ್ನಿಂಗ್ ಹ್ಯಾಂ ರಸ್ತೆಯಲ್ಲಿರುವ ಕಚೇರಿಯಲ್ಲಿ ಪೊಲೀಸ್ ಆಯುಕ್ತ ಟಿ.ಸುನೀಲ್ ಕುಮಾರ್ ಅವರನ್ನು ಭೇಟಿ ಮಾಡಿದರು.
ಈ ಬಗ್ಗೆ ಸುದ್ದಿಗಾರರಿಗೆ ಮಾಹಿತಿ ನೀಡಲು ಅರ್ಜುನ್ ಸರ್ಜಾ ನಿರಾಕರಿಸಿದರು. ಇತ್ತೀಚೆಗಷ್ಟೇ, ಅರ್ಜುನ್ ಸರ್ಜಾ ವಿರುದ್ಧ ನಟಿ ಶ್ರುತಿ ಹರಿಹರನ್ ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದರು. ಈ ಪ್ರಕರಣದ ಸದ್ಯ ನ್ಯಾಯಾಲಯದಲ್ಲಿದೆ ಎಂದು ತಿಳಿದುಬಂದಿದೆ.
Next Story