ಸಂಪುಟ ದರ್ಜೆ ಸಚಿವರಿಗೆ ಅವಮಾನ ಸಲ್ಲ: ಮುಖ್ಯಮಂತ್ರಿ ಕುಮಾರಸ್ವಾಮಿ
ಬೆಂಗಳೂರು, ಜ. 23: ಸಿದ್ದಗಂಗಾ ಶ್ರೀಗಳ ಅಂತ್ಯ ಸಂಸ್ಕಾರದ ಸ್ಥಳಕ್ಕೆ ಕೆಲಸಕ್ಕೆ ಬಾರದವರಿಗೆಲ್ಲ ಪ್ರವೇಶ ನೀಡಿ, ಸಂಪುಟ ದರ್ಜೆ ಸಚಿವರಿಗೆ ಪ್ರವೇಶ ನೀಡದೆ ಇರುವುದು ಸಲ್ಲ. ಹೀಗಾಗಿ ಸಾ.ರಾ.ಮಹೇಶ್ ಪ್ರಶ್ನಿಸಿದ್ದಾರೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.
ಬುಧವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಸಂಪುಟ ಸಹೊದ್ಯೋಗಿಗೆ ಅವಮಾನ ಮಾಡಿದರೆ ಅದು ಮುಖ್ಯಮಂತ್ರಿಯಾದ ನನಗೆ ಅವಮಾನ ಮಾಡಿದಂತೆ. ಹೀಗಾಗಿ ನಾನು ಆ ಅಧಿಕಾರಿಗಳಿಗೆ ಬುದ್ಧಿ ಹೇಳಿದ್ದೇನೆ. ನಿನ್ನೆ ಸಂಜೆಯೇ ಆ ವಿಷಯ ಇತ್ಯರ್ಥಪಡಿಸಲಾಗಿದೆ ಎಂದರು.
ಶಿವಕುಮಾರ ಸ್ವಾಮೀಜಿ ಕ್ರಿಯಾ ಸಮಾದಿ ವೇಳೆ, ಸಚಿವ ಸಾ.ರಾ.ಮಹೇಶ್ ಅವರಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರವೇಶ ನಿರಾಕರಿಸಿದ್ದರು. ಈ ವೇಳೆ ಎಸ್ಪಿ ಹಾಗೂ ಸಚಿವರ ನಡುವೆ ಮಾತಿನ ಚಕಮಕಿ ನಡೆದಿತ್ತು. ಆ ಹಿನ್ನೆಲೆಯಲ್ಲಿ ಎಸ್ಪಿ ಕಣ್ಣೀರು ಹಾಕಿದ ವಿಡಿಯೋ ವೈರಲ್ ಆಗಿತ್ತು.
Next Story