ಕೆಎಸ್ಸಾರ್ಟಿಸಿ ಬಸ್ ಢಿಕ್ಕಿ: ಬೈಕ್ ಸವಾರ ಮೃತ್ಯು
ಬೆಂಗಳೂರು, ಫೆ.3: ಕೆಎಸ್ಸಾರ್ಟಿಸಿ ಬಸ್ಯೊಂದು ಢಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಮೃತಪಟ್ಟಿರುವ ಆರೋಪ ಕೇಳಿಬಂದಿದ್ದು, ಇಲ್ಲಿನ ರಾಜಾನುಕುಂಟೆ ಪೊಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ ಎನ್ನಲಾಗಿದೆ.
ನಿತೀಶ್(18) ಎಂಬಾತ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.
ಜಾಲಿಗೆ ಗ್ರಾಮದ ನಿವಾಸಿ ನಿತೀಶ್, ಇಂದು ಬೆಳಗ್ಗೆ 9 ಗಂಟೆ ಸುಮಾರಿಗೆ ಸಹೋದರಿ ಅನ್ನು ಬಸ್ ನಿಲ್ದಾಣಕ್ಕೆ ಬಿಟ್ಟು, ಮನೆಗೆ ವಾಪಸ್ಸು ಬರುತ್ತಿದ್ದ ಸಂದರ್ಭದಲ್ಲಿ ಅರದೇಶನಹಳ್ಳಿ ಗೇಟ್ ಬಳಿ ಗೌರಿಬಿದನೂರು ಮಾರ್ಗವಾಗಿ ಬರುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಢಿಕ್ಕಿ ರಭಸಕ್ಕೆ ಬೈಕ್ ಸಮೇತ ನಿತೀಶ್ ಬಸ್ ಕೆಳಗೆ ಸಿಲುಕಿ ಗಂಭೀರ ಗಾಯಗೊಂಡಿದ್ದರು. ಬಳಿಕ ಸ್ಥಳೀಯರ ಸಹಾಯದಿಂದ ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದ್ದರೂ, ಚಿಕಿತ್ಸೆ ಫಲಕಾರಿಯಾಗದೇ ನಿತೀಶ್ ಸಾವಿಗೀಡಾಗಿದ್ದಾರೆ ಎಂದು ತಿಳಿದುಬಂದಿದೆ.
ಪ್ರಕರಣ ಸಂಬಂಧ ರಾಜನಕುಂಟೆ ಠಾಣಾ ಪೊಲೀಸರು ಪ್ರಕರಣ ದಾಖಲು ಮಾಡಿ, ಬಸ್ ಚಾಲಕನನ್ನು ಬಂಧಿಸಿ ತನಿಖೆ ಕೈಗೊಂಡಿದ್ದಾರೆ.
Next Story