ರಾಜ್ಯಪಾಲರ ಭಾಷಣಕ್ಕೆ ಅಡ್ಡಿ: ಬಿಜೆಪಿ ವರ್ತನೆಗೆ ಕಾಂಗ್ರೆಸ್ ಖಂಡನೆ
ಬೆಂಗಳೂರು, ಫೆ.6: ರಾಜ್ಯಪಾಲರ ಭಾಷಣಕ್ಕೆ ಅಡ್ಡಿಪಡಿಸಿದ ಬಿಜೆಪಿ ವರ್ತನೆಯನ್ನು ಕಾಂಗ್ರೆಸ್ ಬಲವಾಗಿ ಖಂಡಿಸಿದೆ. ಅಲ್ಲದೆ, ವಿರೋಧ ನಾಯಕ ಬಿ.ಎಸ್. ಯಡಿಯೂರಪ್ಪ ರಾಜ್ಯದ ಜನರಿಗೆ ದ್ರೋಹ ಬಗೆದಿದ್ದಾರೆ ಎಂದು ಆರೋಪಿಸಿದೆ.
‘ಆಪರೇಷನ್ ಕಮಲ ಮಾಡಲ್ಲ, ಅಧಿವೇಶನಕ್ಕೂ ಅಡ್ಡಿಪಡಿಸೊಲ್ಲ ಎಂದು ಹೇಳಿದ್ದ ಯಡಿಯೂರಪ್ಪ ಅಧಿವೇಶನ ಆರಂಭದಲ್ಲೇ ಗಲಾಟೆ ಆರಂಭಿಸುವ ಮೂಲಕ ಜನದ್ರೋಹಿಯಾಗಿದ್ದಾರೆ. ಬಿಜೆಪಿ ಶಾಸಕರು ಗದ್ದಲದಿಂದ ರಾಜ್ಯಪಾಲರಿಗೂ, ಸದನಕ್ಕೂ ಅಗೌರವವನ್ನು ತೋರಿದ್ದಾರೆ. ಇದು ರಾಜ್ಯದ ಅಭಿವೃದ್ಧಿ ಬಗ್ಗೆ ಕಾಳಜಿ ಇಲ್ಲದ ಬಿಜೆಪಿಯ ಹತಾಶ ಮನಃಸ್ಥಿತಿಯ ಪ್ರತೀಕವಾಗಿದೆ’ ಎಂದು ಕೆಪಿಸಿಸಿ ಟ್ವಿಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದೆ.
Next Story