ಬೈಕ್ಗಳ ನಡುವೆ ಅಪಘಾತ: ಓರ್ವ ಸಾವು
ಬೆಂಗಳೂರು, ಫೆ.20: ಮುಂದೆ ಹೋಗುತ್ತಿದ್ದ ಕಾರನ್ನು ಹಿಂದಿಕ್ಕಲು ಹೋಗಿ ಎದುರಿನಿಂದ ಬಂದ ಬೈಕ್ಗೆ ಢಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟಿರುವ ಘಟನೆ ಕಬ್ಬನ್ ಪಾರ್ಕ್ನಲ್ಲಿ ನಿನ್ನೆ ರಾತ್ರಿ ನಡೆದಿದೆ.
ತಮಿಳುನಾಡಿನ ವೇಲೂರಿನ ಶಾಹಿದ್ ಹುಸೇನ್(23) ಮೃತಪಟ್ಟಿದ್ದು, ಗಾಯಗೊಂಡಿರುವ ಕೃಷ್ಣಮೂರ್ತಿ ಹಾಗೂ ಶ್ರೇಯ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಶಾಹಿದ್ ಹುಸೇನ್ ನಿನ್ನೆ ರಾತ್ರಿ 7ರ ವೇಳೆ ಕೆ.ಆರ್.ಸರ್ಕಲ್ ಕಡೆಯಿಂದ ಕಬ್ಬನ್ ಪಾರ್ಕ್ ಒಳಗೆ ಬೈಕ್ನಲ್ಲಿ ವೇಗವಾಗಿ ಬರುತ್ತಿದ್ದಾಗ ಫಿಶ್ ಕ್ಯಾಂಟೀನ್ ಬಳಿ ಮುಂದೆ ಹೋಗುತ್ತಿದ್ದ ಕಾರನ್ನು ಹಿಂದಿಕ್ಕಲು ಹೋಗಿದ್ದು, ಈ ವೇಳೆ ಎದುರಿನಿಂದ ಬರುತ್ತಿದ್ದ ಮತ್ತೊಂದು ಬೈಕ್ಗೆ ಢಿಕ್ಕಿ ಹೊಡೆದಿದೆ.
ಢಿಕ್ಕಿಯ ರಭಸಕ್ಕೆ ಹೆಲ್ಮೆಟ್ ಹಾಕಿಲ್ಲದಿದ್ದರಿಂದ ತಲೆಗೆ ಗಂಭೀರವಾಗಿ ಗಾಯಗೊಂಡಿದ್ದ ಶಾಹಿದ್ ಹುಸೇನ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಮತ್ತೊಂದು ಬೈಕ್ನಲ್ಲಿದ್ದ ಕೃಷ್ಣಮೂರ್ತಿ ಹಾಗೂ ಶ್ರೇಯ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನಾ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ ಕಬ್ಬನ್ ಪಾರ್ಕ್ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.