ಆನಂದ್ ಸಿಂಗ್ ಮೇಲೆ ಹಲ್ಲೆ ಪ್ರಕರಣ: ಶಾಸಕ ಗಣೇಶ್ ನ್ಯಾಯಾಂಗ ಬಂಧನ ವಿಸ್ತರಣೆ
ಬೆಂಗಳೂರು, ಮಾ.6: ಶಾಸಕ ಆನಂದ್ ಸಿಂಗ್ ಮೇಲಿನ ಹಲ್ಲೆ ಪ್ರಕರಣ ಸಂಬಂಧ ಕಂಪ್ಲಿ ಶಾಸಕ ಜೆ.ಎನ್. ಗಣೇಶ್ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ಮಾ.19ವರೆಗೂ ವಿಸ್ತರಿಸಲಾಗಿದೆ.
ಬುಧವಾರ ರಾಮನಗರದ ಸಿಜೆಎಂ ನ್ಯಾಯಾಲಯದಲ್ಲಿ ನಡೆಯಬೇಕಿದ್ದ ವಿಚಾರಣೆಗೆ ಕಂಪ್ಲಿ ಶಾಸಕ ಜೆ.ಎನ್.ಗಣೇಶ್ ಗೈರಾಗಿದ್ದರು. ಈ ಹಿನ್ನೆಲೆ ಅವರ ನ್ಯಾಯಾಂಗ ಬಂಧನವನ್ನು ಮತ್ತೆ 14 ದಿನ ವಿಸ್ತರಿಸಿ ನ್ಯಾಯಾಧೀಶೆ ಅನಿತಾ ಆದೇಶ ನೀಡಿದರು.
ಏನಿದು ಪ್ರಕರಣ: ಶಾಸಕ ಆನಂದ್ ಸಿಂಗ್ ಮೇಲೆ ಕಂಪ್ಲಿ ಶಾಸಕ ಗಣೇಶ್ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಡದಿ ಠಾಣಾ ಪೊಲೀಸರು ಫೆ.20ರಂದು ಬಂಧಿಸಿದ್ದರು. 21ರಂದು ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಬುಧವಾರ(ಮಾ.6) ನ್ಯಾಯಾಂಗ ಬಂಧನದ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ರಾಮನಗರದ ಸಿಜೆಎಂ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಬೇಕಿತ್ತು. ಆದರೆ, ಅನಾರೋಗ್ಯದ ಕಾರಣದಿಂದ ಅವರು ವಿಚಾರಣೆಗೆ ಗೈರಾಗಿದ್ದಾರೆ. ಹೀಗಾಗಿ ಬಂಧನದ ಅವಧಿ ವಿಸ್ತರಿಸಲಾಗಿದೆ.
Next Story