ಆದಾಯ ತೆರಿಗೆ ಇಲಾಖಾಧಿಕಾರಿಗಳಿಂದ ರಾಜ್ಯದ ವಿವಿಧೆಡೆ ದಿಢೀರ್ ದಾಳಿ
ಬೆಂಗಳೂರು, ಮಾ. 15: ಬೆಂಗಳೂರು ಮತ್ತು ಹಾವೇರಿಯಲ್ಲಿ ಶುಕ್ರವಾರ ಏಕಕಾಲಕ್ಕೆ ದಾಳಿ ನಡೆಸಿರುವ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಸುಮಾರು 25 ಲಕ್ಷ ರೂ. ವಶಪಡಿಸಿಕೊಂಡಿರುವ ಬಗ್ಗೆ ವರದಿಯಾಗಿದೆ.
ಲೋಕಸಭೆ ಚುನಾವಣೆಗಾಗಿ ಗುತ್ತಿಗೆದಾರರಿಂದ ಹಣ ಸಂಗ್ರಹಿಸುತ್ತಿದ್ದ ಆರೋಪದಲ್ಲಿ ಇಂಜಿನಿಯರ್ ಓರ್ವ ಐಟಿ ಬಲೆಗೆ ಬಿದ್ದಿದ್ದಾನೆ ಎಂದು ತಿಳಿದುಬಂದಿದೆ. ಆತ ಬೆಂಗಳೂರಿನ ಹೋಟೆಲ್ವೊಂದರ ರೂಮಿನಲ್ಲಿ ಹಣ ಸಂಗ್ರಹಿಸುತಿದ್ದ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಬೆಂಗಳೂರಿನ ಹಲವು ಹೋಟೆಲ್ ಗಳಿಗೆ ಅಧಿಕಾರಿಗಳು ದಾಳಿ ಮಾಡಿ ತಪಾಸಣೆ ಮಾಡುತಿದ್ದಾರೆ.
ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ರಾಜ್ಯದ ವಿವಿಧೆಡೆ ದಿಢೀರ್ ದಾಳಿ ನಡೆಸಿದ್ದಾರೆ.
Next Story