ಸರಕಾರಿ ನೌಕರರ ಸಂಘದ ಚುನಾವಣೆ ಮುಂದೂಡಿಕೆ
ಬೆಂಗಳೂರು, ಮಾ.15: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಚುನಾವಣೆಯನ್ನು ಮುಂದೂಡಲಾಗಿದೆ.
ಸಂಘದ ಎಲ್ಲ ಹಂತದ ಸಾರ್ವತ್ರಿಕ ಚುನಾವಣೆ ಪ್ರಕ್ರಿಯೆಗಳು ನಡೆಯುತ್ತಿದ್ದು, ಲೋಕಸಭಾ ಚುನಾವಣಾ ನೀತಿ ಸಂತೆ ಜಾರಿಗೊಂಡಿದ್ದರಿಂದ, ರಾಜ್ಯ ಸರಕಾರಿ ನೌಕರರು ಲೋಕಸಭೆ ಚುನಾವಣೆಯಲ್ಲಿ ಕಾರ್ಯ ನಿರ್ವಹಿಸಬೇಕಿರುವುದರಿಂದ ನೌಕರರ ಸಂಘದ ಚುನಾವಣೆಯನ್ನು ಮುಂದೂಡಲಾಗಿದೆ ಎಂದು ಸಹಕಾರ ಸಂಘಗಳ ಉಪ ನಿಬಂಧಕರು, ಚುನಾವಣಾಧಿಕಾರಿ ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.
ಸರಕಾರಿ ನೌಕರರ ಸಂಘದ ಯೋಜನೆ, ತಾಲೂಕು, ಜಿಲ್ಲಾ ಘಟಕಗಳು ಹಾಗೂ ಬೆಂಗಳೂರು ನಗರ ಇಲಾಖಾವಾರು ರಾಜ್ಯ ಪರಿಷತ್ ಸದಸ್ಯರ ಚುನಾವಣೆಗಳು ಹಾಗೂ ಕೇಂದ್ರ ಸಂಘದ ಅಧ್ಯಕ್ಷರು ಮತ್ತು ಖಜಾಂಚಿ ಸ್ಥಾನದ ಚುನಾವಣಾ ಪ್ರಕ್ರಿಯೆಗಳನ್ನು ಲೋಕಸಭಾ ಚುನಾವಣಾ ನೀತಿಸಂಹಿತೆ ಪೂರ್ಣಗೂಂಡ ನಂತರ ಪ್ರಾರಂಭಿಸಲಾಗುವುದು ಎಂದಿದ್ದಾರೆ.
ಸಂಘದ ಎಲ್ಲಾ ಹಂತದ ಚುನಾವಣೆಗಳಲ್ಲಿ ನೌಕರ ಸದಸ್ಯರು ಪಾಲ್ಗೊಳ್ಳಲು ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.