ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ರಿಗೆ ಹೃದಯಾಘಾತ
ಬೆಂಗಳೂರು, ಮಾ.16: ಜೆಡಿಎಸ್ ಕರ್ನಾಟಕ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಅವರಿಗೆ ಲಘು ಹೃದಯಾಘಾತ ಉಂಟಾಗಿದ್ದು, ಅವರನ್ನು ಹೈದರಾಬಾದ್ನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಶುಕ್ರವಾರ ಹೈದರಾಬಾದ್ನಲ್ಲಿ ಆಯೋಜಿಸಲಾಗಿದ್ದ ಕುರುಬರ ಸಮಾವೇಶದಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದ ವೇಳೆ ವಿಶ್ವನಾಥ್ರಿಗೆ ಲಘು ಹೃದಯಾಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ಕೂಡಲೇ ಅವರನ್ನು ಇಲ್ಲಿನ ಓಝೋನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರು ಚೇತರಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
‘‘ವಿಶ್ವನಾಥ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಇಂದು ಅಥವಾ ರವಿವಾರ ಓಝೋನ್ ಆಸ್ಪತ್ರೆಯಿಂದ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಏರ್ ಆ್ಯಂಬುಲೆನ್ಸ್ ಮೂಲಕ ಕರೆ ತರಲಾಗುವುದು’’ ಎಂದು ಜಯದೇವ ಆಸ್ಪತ್ರೆಯ ನಿರ್ದೇಶಕ ಡಾ.ಮಂಜುನಾಥ್ ತಿಳಿಸಿದ್ದಾರೆ.
‘‘ವಿಶ್ವನಾಥ್ ಅವರಿಗೆ ಹೃದಯ ಸಂಬಂಧಿ ಸಮಸ್ಯೆ ಇತ್ತು. ಜೊತೆಗೆ ರಕ್ತನಾಳದಲ್ಲಿ ಬ್ಲಾಕ್ ಇದೆ’’ ಎಂದವರು ವಿವರಿಸಿದ್ದಾರೆ.
ಈಗಾಗಲೇ ಹೈದರಾಬಾದ್ಗೆ ತೆರಳಿರುವ ಡಾ.ಮಂಜುನಾಥ್ ಚಿಕಿತ್ಸೆಯ ಉಸ್ತುವಾರಿ ವಹಿಸಿಕೊಂಡಿದ್ದಾರೆ.