ಯಾವುದೇ ಅಭ್ಯರ್ಥಿಯ ಪರ ಪ್ರಚಾರ ಕೈಗೊಳ್ಳದಿರಲು ನಟ ಪುನೀತ್ ನಿರ್ಧಾರ
ಬೆಂಗಳೂರು, ಮಾ. 20: ಮಂಡ್ಯ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಸುಮಲತಾ ಅಂಬರೀಶ್ ಪರ ಪ್ರಚಾರಕ್ಕೆ ತೆರಳದಿರಲು ನಟ ಪುನೀತ್ ರಾಜ್ ಕುಮಾರ್ ತೀರ್ಮಾನಿಸಿದ್ದಾರೆಂದು ಗೊತ್ತಾಗಿದೆ.
ನಟ ಅಂಬರೀಶ್ ಅವರು ಚುನಾವಣೆಗೆ ಸ್ಪರ್ಧಿಸಿದ ಸಂದರ್ಭದಲ್ಲಿಯೂ ಪುನೀತ್ ರಾಜ್ಕುಮಾರ್ ಅವರ ಪರ ಪ್ರಚಾರಕ್ಕೆ ತೆರಳಿರಲಿಲ್ಲ. ಇದೀಗಲೂ ಸುಮಲತಾ ಅವರ ಪರ ಪ್ರಚಾರಕ್ಕೆ ಹೋಗದಿರಲು ನಿರ್ಧರಿಸಿದ್ದಾರೆಂದು ಮೂಲಗಳು ತಿಳಿಸಿವೆ.
ನಮಗೆ ಜನಬೇಕು, ರಾಜಕಾರಣ ಬೇಡ. ಹೀಗಾಗಿ, ನಟಿ ಸುಮಲತಾ ಸೇರಿದಂತೆ ಯಾವುದೇ ಪಕ್ಷದ ಯಾವುದೇ ಅಭ್ಯರ್ಥಿಯ ಪರವೂ ಚುನಾವಣಾ ಪ್ರಚಾರ ಕೈಗೊಳ್ಳದಿರಲು ಪುನೀತ್ ರಾಜ್ಕುಮಾರ್ ತೀರ್ಮಾನಿಸಿದ್ದಾರೆಂದು ತಿಳಿದು ಬಂದಿದೆ.
ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸಿರುವ ಸುಮಲತಾ ಪರ ಪುನೀತ್ ರಾಜ್ಕುಮಾರ್ ಪ್ರಚಾರ ಮಾಡುತ್ತಾರೆ ಎಂದು ಹೇಳಲಾಗಿತ್ತು. ಆದರೆ, ಇದೀಗ ಪ್ರಚಾರದಿಂದ ಪುನೀತ್ ರಾಜ್ಕುಮಾರ್ ಪ್ರಚಾರಕ್ಕೆ ತೆರಳುವುದಿಲ್ಲ ಎಂದು ಆಪ್ತರ ಬಳಿ ಹೇಳಿಕೊಂಡಿದ್ದಾರೆ ಎಂದು ಗೊತ್ತಾಗಿದೆ.
Next Story