ಯಡಿಯೂರಪ್ಪ ಡೈರಿ ಪ್ರಕರಣ: ಸುರ್ಜೆವಾಲ-ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ದೂರು
ಬೆಂಗಳೂರು, ಮಾ.25: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮೇಲೆ ನಕಲಿ ಡೈರಿಯನ್ನು ಆಧಾರವಾಗಿಟ್ಟುಕೊಂಡು, ಗಂಭೀರ ಆರೋಪ ಮಾಡಿರುವ ಕಾಂಗ್ರೆಸ್ ಮುಖಂಡ ರಣದೀಪ್ ಸುರ್ಜೆವಾಲ ಮತ್ತು ಆ ಪಕ್ಷದ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ರಾಜ್ಯ ಬಿಜೆಪಿ ನಿಯೋಗ ಸೋಮವಾರ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ.
ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರವಿಂದ ಲಿಂಬಾವಳಿ ನೇತೃತ್ವದ ನಿಯೋಗವು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ಗೆ ಲಿಖಿತ ದೂರು ಸಲ್ಲಿಸಿತು. ಈ ವೇಳೆ ವಿಧಾನಪರಿಷತ್ ಸದಸ್ಯ ಲೇಹರ್ಸಿಂಗ್, ರಾಜ್ಯ ಸಹ ವಕ್ತಾರ ಎ.ಎಚ್.ಆನಂದ್, ಎಸ್.ಪ್ರಕಾಶ್ ಹಾಗೂ ವಿನೋದ್, ದತ್ತಗುರು ಹೆಗಡೆ, ಬಾಲಾಜಿ ಉಪಸ್ಥಿತರಿದ್ದರು.
Next Story