ರೌಡಿ ಲಕ್ಷ್ಮಣ ಕೊಲೆ ಪ್ರಕರಣ: 6 ಆರೋಪಿಗಳ ನ್ಯಾಯಾಂಗ ಬಂಧನಕ್ಕೆ ಕೋರ್ಟ್ ಆದೇಶ
ಬೆಂಗಳೂರು, ಮಾ.25: ರೌಡಿ ಲಕ್ಷ್ಮಣ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಮಂದಿ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ 1ನೆ ಎಸಿಎಂಎಂ ಕೋರ್ಟ್ ಆದೇಶ ಹೊರಡಿಸಿದೆ.
ಕೊಲೆಯಾದ ದಿನದಿಂದ ಇಲ್ಲಿಯವರೆಗೆ ಸುಮಾರು 15 ದಿನಗಳ ಕಾಲ ಆರು ಮಂದಿ ಆರೋಪಿಗಳನ್ನು ಹೆಚ್ಚಿನ ವಿಚಾರಣೆಗೆ ಸಿಸಿಬಿ ವಶಕ್ಕೆ ಪಡೆದಿತ್ತು. ಮಾ.25ರಂದು ವಿಚಾರಣೆ ಅಂತ್ಯವಾದ ಹಿನ್ನೆಲೆಯಲ್ಲಿ ಆರೋಪಿಗಳಾದ ರೂಪೇಶ್, ವರ್ಷಿಣಿ, ದೇವರಾಜ, ಮಧು ಸೇರಿ 6 ಮಂದಿ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ. ಉಳಿದ ಇನ್ನಿಬ್ಬರು ಆರೋಪಿಗಳು ಸಿಸಿಬಿ ವಶದಲ್ಲಿ ಇದ್ದುಕೊಂಡೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮಾರ್ಚ್ 7 ರಂದು ರೌಡಿ ಲಕ್ಷ್ಮಣನ ಕೊಲೆ ಹಾಡಹಾಗಲೇ ನಡೆದಿತ್ತು. ಈ ಹಿನ್ನೆಲೆಯಲ್ಲಿ ಮೊದಲು ಉತ್ತರ ವಿಭಾಗ ಪೊಲಿಸರು ತನಿಖೆ ನಡೆಸಿ ನಂತರ ಹೆಚ್ಚಿನ ತನಿಖೆಗೆ ಸಿಸಿಬಿಗೆ ವರ್ಗಾವಣೆಯಾಗಿತ್ತು. ನಂತರ ಕೊಲೆ ಯಾವ ಕಾರಣಕ್ಕೆ ನಡೆಯಿತು ಅನ್ನುವ ಸಂಪೂರ್ಣ ಮಾಹಿತಿಯನ್ನು ಸಿಸಿಬಿ ಕಲೆ ಹಾಕಿತ್ತು. ಇದೀಗ ಪ್ರಕರಣದ ತನಿಖೆಯ ಹಂತ ಕೊನೆ ಹಂತಕ್ಕೆ ತಲುಪಿರುವ ಕಾರಣ ಆರೋಪಿಗಳನ್ನು ನ್ಯಾಯಂಗ ಬಂಧನಕ್ಕೆ ಕಳುಹಿಸಲಾಗಿದೆ. ಅಲ್ಲದೇ, ದೋಷಾರೋಪಣಾ ಪಟ್ಟಿಯನ್ನ ಸಿಸಿಬಿ ಸಿದ್ಧ ಮಾಡುತ್ತಿದೆ ಎನ್ನುವ ವಿಚಾರ ತಿಳಿದು ಬಂದಿದೆ.