ಬ್ಯಾಂಕ್ ಸಾಲ ಮರುಪಾವತಿಸದ ಪ್ರಕರಣ: ನಟ ಎಸ್.ನಾರಾಯಣ್ ಬಂಧನ, ಬಿಡುಗಡೆ
ಬೆಂಗಳೂರು, ಎ.5: ನಟ, ನಿರ್ದೇಶಕ ಎಸ್.ನಾರಾಯಣ್ ಅವರು ಬಂಧನಕ್ಕೆ ಒಳಗಾಗಿ ಬಿಡುಗಡೆಯಾಗಿದ್ದಾರೆ.
ಐಡಿಬಿಐ ಬ್ಯಾಂಕ್ನಲ್ಲಿ ಎಸ್.ನಾರಾಯಣ್ ಮೂರು ಕೋಟಿ ರೂ.ಹಣವನ್ನು ಸಾಲ ಪಡೆದಿದ್ದರು. ಸಾಲ ತೀರಿಸುವ ಗಡುವು ಮುಗಿದಿದ್ದರೂ ಎಸ್.ನಾರಾಯಣ್ ಸಾಲವನ್ನು ಮರು ಪಾವತಿಸಿರಲಿಲ್ಲ. ಸಾಲ ಮರುಪಾವತಿ ಮಾಡದ ಹಿನ್ನೆಲೆಯಲ್ಲಿ ಬ್ಯಾಂಕ್ ದೂರು ನೀಡಿದ ಹಿನ್ನೆಲೆಯಲ್ಲಿ ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣ ದಾಖಲಾದ ಹಿನ್ನೆಲೆಯಲ್ಲಿ ಎಸ್.ನಾರಾಯಣ್ ಅವರನ್ನು ಪೊಲೀಸರು ಬಂಧಿಸಿದ್ದರು. ಬಂಧನದ ಬಳಿಕ ಎಸ್.ನಾರಾಯಣ್ ಅವರು ಸಾಲ ವಸೂಲಾತಿ ನ್ಯಾಯಾಧೀಕರಣಕ್ಕೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ನ್ಯಾಯಾಧೀಕರಣವು ಎಸ್.ನಾರಾಯಣ್ ಅವರಿಗೆ ಜಾಮೀನು ನೀಡಿ ಆದೇಶಿಸಿದೆ.
Next Story