ಅತ್ಯಾಚಾರಕ್ಕೆ ಯತ್ನ ಆರೋಪ: ದುಷ್ಕರ್ಮಿಗೆ ಥಳಿಸಿದ ಸಾರ್ವಜನಿಕರು
ಬೆಂಗಳೂರು, ಎ.14: ಒಂಟಿ ಮಹಿಳೆಯ ಅತ್ಯಾಚಾರಕ್ಕೆ ಯತ್ನಿಸಿದ ಆರೋಪ ಕೇಳಿಬಂದ ಹಿನ್ನೆಲೆ, ಯುವನೋರ್ವನನ್ನು ಸಾರ್ವಜನಿಕರು ಥಳಿಸಿ, ಪೊಲೀಸರಿಗೆ ಒಪ್ಪಿಸಿರುವ ಘಟನೆ ನಗರದಲ್ಲಿ ನಡೆದಿದೆ.
ಒಡಿಶಾ ಮೂಲದ ಹರಿಶೇಖರ್(28) ಎಂಬಾತನನ್ನು ಇಲ್ಲಿನ ಹುಳಿಮಾವು ಠಾಣಾ ಪೊಲೀಸರಿಗೆ ಒಪ್ಪಿಸಿದ್ದಾರೆ.
ಶುಕ್ರವಾರ ಮಹಿಳೆಯೊಬ್ಬರು ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಆರೋಪಿ ಹರಿಶೇಖರ್ ಆಕೆಯನ್ನ ಹಿಂಬಾಲಿಸಿಕೊಂಡು ಬಂದಿದ್ದ. ಕೂಡಲೇ ಮಹಿಳೆ ಮನೆಗೆ ಹೋಗಿ ಬಾಗಿಲು ಹಾಕಿಕೊಂಡಿದ್ದಾರೆ. ಬಳಿಕ, ಹರಿಶೇಖರ್ ಮನೆಯ ಬಾಗಿಲು ಒಡೆದು ಒಳನುಗ್ಗಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಈ ವೇಳೆ, ಮಹಿಳೆಯ ಕೂಗಾಟ ಕೇಳಿ ಸ್ಥಳೀಯರು ಆರೋಪಿಯನ್ನು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ ಎನ್ನಲಾಗಿದೆ.
Next Story