ಮಧು ಅನುಮಾನಾಸ್ಪದ ಸಾವು ಪ್ರಕರಣ: ಶೀಘ್ರ ತನಿಖೆಗೆ ನಟ ದರ್ಶನ್ ಒತ್ತಾಯ
ಬೆಂಗಳೂರು, ಎ.20: ರಾಯಚೂರಿನಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿ ಮಧು ಪತ್ತಾರ ಅನುಮಾನಾಸ್ಪದ ಸಾವಿನ ಪ್ರಕರಣವನ್ನು ತ್ವರಿತವಾಗಿ ಸೂಕ್ತ ತನಿಖೆ ನಡೆಸಬೇಕೆಂದು ನಟ ದರ್ಶನ್ ಒತ್ತಾಯಿಸಿದ್ದಾರೆ.
ಅತ್ಯಾಚಾರ ಪ್ರಕರಣದ ಅಪರಾಧಿಗಳಿಗೆ ಇನ್ನಷ್ಟು ಕಠಿಣ ಶಿಕ್ಷೆ ನೀಡುವಂತಹ ಕಾನೂನು ಜಾರಿಯಾಗಬೇಕು. ಎಂಜಿನಿಯರಿಂಗ್ ವಿದ್ಯಾರ್ಥಿನಿ ಮಧು ಪತ್ತಾರ ಸಾವು ಪ್ರಕರಣದಲ್ಲಿ ಭಾಗಿಗಳಾದ ದುಷ್ಕರ್ಮಿಗಳಿಗೆ ಶೀಘ್ರವಾಗಿ ಶಿಕ್ಷೆ ನೀಡುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಪಾರದರ್ಶಕ ತನಿಖೆ ನಡೆಸಬೇಕು ಎಂದು ಅವರು ಟ್ವಿಟ್ಟರ್ ಮೂಲಕ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.
Next Story