ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ಬ್ರಾಹ್ಮಣ ಮಹಾಸಭಾ ದೂರು
ಬೆಂಗಳೂರು, ಎ.20: ಬ್ರಾಹ್ಮಣರು ಸೇನೆ ಸೇರಿ ಜೀವ ಬಿಟ್ಟ ಇತಿಹಾಸವಿಲ್ಲ ಎಂಬ ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ ಖಂಡಿಸಿ, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಸದಸ್ಯರು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಅವರಿಗೆ ದೂರು ಸಲ್ಲಿಸಿದ್ದಾರೆ.
ಸಚಿವ ಸತೀಶ್ ಜಾರಕಿಹೊಳಿ ಅವರು ದಲಿತರು, ಹಿಂದುಳಿದವರು, ಮುಸ್ಲಿಮರು ಸೇನೆಯಲ್ಲಿ ಪ್ರಾಣ ಬಿಟ್ಟಿದ್ದಾರೆ. ಆದರೆ, ದೇಶಪಾಂಡೆ, ಕುಲಕರ್ಣಿ, ಜೋಷಿ ಸೇರಿದಂತೆ ಬ್ರಾಹ್ಮಣರು ಪ್ರಾಣ ಬಿಟ್ಟಿರುವ ಇತಿಹಾಸವಿಲ್ಲ ಎಂದಿದ್ದಾರೆ. ಚುನಾವಣಾ ಪ್ರಚಾರದ ವೇಳೆ ಸಚಿವರು ಹೀಗೆ ಹೇಳಿರುವುದು ಸರಿಯಲ್ಲ ಎಂದು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಪ್ರಕಟನೆ ತಿಳಿಸಿದೆ.
Next Story