ಕಂಪ್ಲಿ ಶಾಸಕ ಗಣೇಶ್ಗೆ ಮುಂದುವರೆದ ಚಿಕಿತ್ಸೆ
ಬೆಂಗಳೂರು, ಎ.20: ಅನಾರೋಗ್ಯದಿಂದ ಬಳಲುತ್ತಿರುವ ಕಂಪ್ಲಿ ಶಾಸಕ ಗಣೇಶ್ ಅವರಿಗೆ ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.
ಜೈಲು ಸೇರಿದ ದಿನದಿಂದ ಶಾಸಕ ಗಣೇಶ್ ಆರೋಗ್ಯದಲ್ಲಿ ಏರುಪೇರು ಕಂಡುಬಂದಿದ್ದು, ಬೆನ್ನು ಮೂಳೆ ನೋವು, ಮೂತ್ರಕೋಶ ಹಾಗೂ ಹರ್ನಿಯಾ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.
ಕೇಂದ್ರ ಕಾರಾಗೃಹ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ನೀಡಿದರೂ, ಕೂಡ ಅವರು ಗುಣಮುಖರಾಗದ ಕಾರಣ ಜೈಲು ಅಧಿಕಾರಿಗಳ ಅನುಮತಿ ಮೇರೆಗೆ ಗಣೇಶ್ ಅನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.
ಫೆಬ್ರವರಿ 21ರಂದು ಕಂಪ್ಲಿ ಶಾಸಕ ಗಣೇಶ ಬಂಧನವಾದ ಬಳಿಕ ಈವರೆಗೂ ಜಾಮೀನು ಸಿಕ್ಕಿಲ್ಲ. ವಿಜಯನಗರ ಶಾಸಕ ಆನಂದ್ ಸಿಂಗ್ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಶಾಸಕ ಗಣೇಶ್ ಪರಪ್ಪನ ಅಗ್ರಹಾರದ ಜೈಲು ಸೇರಿದ್ದಾರೆ.
Next Story