ಸ್ವರ್ಗಕ್ಕೆ ಹೋಗಲಿಚ್ಛಿಸುವವರು ದೇವೇಗೌಡರನ್ನು ವಿರೋಧಿಸಿದರೆ ಸಾಕು: ಬಿಜೆಪಿ ನಾಯಕ ಸುರೇಶ್ ಕುಮಾರ್
ಬೆಂಗಳೂರು, ಎ. 21: ‘ಯಾರು ಸ್ವರ್ಗಕ್ಕೆ ತಲುಪಲು ಇಚ್ಛಿಸುತ್ತಾರೋ ಅವರು ದೇವೇಗೌಡ ಅವರನ್ನು ವಿರೋಧಿಸಿದರೆ ಸಾಕು’ ಎಂದು ಮಾಜಿ ಸಚಿವ ಹಾಗೂ ಬಿಜೆಪಿ ಮುಖಂಡ ಸುರೇಶ್ ಕುಮಾರ್, ಮಾಜಿ ಪ್ರಧಾನಿ ದೇವೇಗೌಡ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.
‘ನನ್ನನ್ನು ವಿರೋಧಿಸಿದವರೆಲ್ಲ ಸ್ವರ್ಗದಲ್ಲಿದ್ದಾರೆ, ನನ್ನೊಂದಿಗೆ ದೈವಶಕ್ತಿ ಇರುವುದರಿಂದ ನಾನಿನ್ನೂ ಬದುಕಿದ್ದೇನೆ’ ಎಂದು ದೇವೇಗೌಡ ಪ್ರತಿಕ್ರಿಯೆ ನೀಡಿದ್ದರು. ಇದಕ್ಕೆ ಟ್ವಿಟ್ಟರ್ ಮೂಲಕ ಪ್ರತಿಕ್ರಿಯೆ ನೀಡಿರುವ ಸುರೇಶ್ ಕುಮಾರ್, ಸ್ವರ್ಗಕ್ಕೆ ಹೋಗುವವರಿಗೆ ದೇವೇಗೌಡರು ಪಾಸ್ಪೋರ್ಟ್, ವೀಸಾ..ಎಲ್ಲವನ್ನೂ ವ್ಯವಸ್ಥೆ ಮಾಡಿ ಸ್ವರ್ಗಕ್ಕೆ ತಲುಪಿಸುತ್ತಾರೆ’ ಎಂದು ಹೇಳಿದ್ದಾರೆ.
Next Story