ಕೊಲೆಯಾದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ
ಬೆಂಗಳೂರು, ಎ.29: ಗಂಭೀರ ಹಲ್ಲೆ ನಡೆಸಿ, ವ್ಯಕ್ತಿಯನ್ನು ಕೊಲೆಗೈದಿರುವ ದುರ್ಘಟನೆ ಇಲ್ಲಿನ ಬೆಂಗಳೂರು ಹೊರವಲಯ ನೆಲಮಂಗಲ ಸಮೀಪದ ಕೆಂಪಲಿಂಗನಹಳ್ಳಿ ಬಳಿ ನಡೆದಿದೆ.
ಬಿಪಿ ಇಂಡಿಯನ್ ಖಾಸಗಿ ಶಾಲೆಯ ಬಳಿಯ ಬಸ್ ನಿಲ್ದಾಣದಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದ್ದು, ಮೃತ ವ್ಯಕ್ತಿ ಸುಮಾರು 40 ವರ್ಷದವರಾಗಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ.
ಮೃತ ದೇಹದ ಗುರುತು ಪತ್ತೆಯಾಗಿಲ್ಲ. ಬೇರೆಡೆ ಕೊಲೆ ಮಾಡಿ ಇಲ್ಲಿ ಶವವನ್ನು ತಂದು ಬಿಸಾಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳೀಯರು ಓಡಾಡುವಾಗ ವ್ಯಕ್ತಿಯ ಶವ ಕಂಡು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಈ ಸಂಬಂಧ ಸ್ಥಳಕ್ಕೆ ಪೊಲೀಸರು ಬಂದು ಪರಿಶೀಲನೆ ಮಾಡಿ ಮೃತದೇಹವನ್ನು ಶವಾಗಾರಕ್ಕೆ ರವಾನಿಸಿ, ಇಲ್ಲಿನ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಿ, ತನಿಖೆ ಕೈಗೊಂಡಿದ್ದಾರೆ.
Next Story