ಕೆಎಸ್ಸಾರ್ಟಿಸಿಯಿಂದ ಮುಖ್ಯಮಂತ್ರಿ ಪ್ರಕೃತಿ ವಿಕೋಪ ಪರಿಹಾರ ನಿಧಿಗೆ 9.17 ಕೋಟಿ ರೂ. ಸಲ್ಲಿಕೆ
ಬೆಂಗಳೂರು, ಮೇ 9: ಮಡಿಕೇರಿ ಪ್ರವಾಹ ಸಂತ್ರಸ್ತರಿಗಾಗಿ ಕೆಎಸ್ಸಾರ್ಟಿಸಿ ವತಿಯಿಂದ ಸಂಗ್ರಹಿಸಲಾದ 9.17 ಕೋಟಿ ರೂ.ಗಳ ಚೆಕ್ಕನ್ನು ಮುಖ್ಯಮಂತ್ರಿಗಳ ಪ್ರಕೃತಿ ವಿಕೋಪ ಪರಿಹಾರ ನಿಧಿಗೆ ಇಂದು ಸಲ್ಲಿಸಲಾಯಿತು.
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ತಮ್ಮ ಕಚೇರಿಯಲ್ಲಿಂದು ಸ್ವೀಕರಿಸಿದರು.
ರಾಜ್ಯ ರಸ್ತೆ ಸಾರಿಗೆಯ ನಾಲ್ಕು ನಿಗಮಗಳ ಅಧಿಕಾರಿ ಹಾಗೂ ಸಿಬ್ಬಂದಿಗಳ ಒಂದು ದಿನದ ಸಂಬಳದಿಂದ ಸಂಗ್ರಹವಾದ ಹಣವನ್ನು ಮಡಿಕೇರಿ ಸಂತ್ರಸ್ತರ ನೆರವಿಗಾಗಿ ಸಲ್ಲಿಸಲಾಗಿದೆ.
ಈ ಸಂದರ್ಭ ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ, ಶಾಸಕರಾದ ಶಿವಲಿಂಗೇಗೌಡ, ಸತ್ಯನಾರಾಯಣ, ಕೆಎಸ್ಸಾರ್ಟಿಸಿ ಹಿರಿಯ ಅಧಿಕಾರಿಗಳಾದ ಬಸವರಾಜು, ಶಿವಯೋಗಿ ಕಳಸದ, ಎನ್.ವಿ.ಪ್ರಸಾದ ಉಪಸ್ಥಿತರಿದ್ದರು.
ಇದೇ ವೇಳೆ ಕೆಎಸ್ಸಾರ್ಟಿಸಿ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿಯಿಂದ 17.81 ಲಕ್ಷ ರೂ.ಗಳ ಪರಿಹಾರ ನಿಧಿ ಚೆಕ್ ಸ್ವೀಕರಿಸಲಾಯಿತು.
Next Story