ಮನೆಗೆ ನುಗ್ಗಿ 3 ಲಕ್ಷ ರೂ. ಮೌಲ್ಯದ ಚಿನ್ನಾಭರಣ ದರೋಡೆ
ಬೆಂಗಳೂರು, ಮೇ 16: ಮನೆಯೊಂದಕ್ಕೆ ನುಗ್ಗಿರುವ ದುಷ್ಕರ್ಮಿಗಳು, ಚಿನ್ನಾಭರಣ, ನಗದು ಕಳವು ಮಾಡಿರುವ ಘಟನೆ ಇಲ್ಲಿನ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮಂಗಳವಾರ ತಡರಾತ್ರಿ ಕೆಂಗೇರಿ ಉಪನಗರದ ನಿವಾಸಿ ರವಿ ಎಂಬುವರ ಮನೆಗೆ ನುಗ್ಗಿದ ದುಷ್ಕರ್ಮಿಗಳು ಈ ಕೃತ್ಯವೆಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. 3 ಲಕ್ಷ ರೂ. ಮೌಲ್ಯದ ಚಿನ್ನಾಭರಣ, 3 ಸಾವಿರ ರೂ. ನಗದು ದೋಚಿ ಪರಾರಿಯಾಗಿದ್ದು, ಈ ಸಂಬಂಧ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
Next Story