ಬೆಂಗಳೂರು: ಎಂಎಂವೈಸಿ ವತಿಯಿಂದ ಮೇ 22ರಂದು ಇಫ್ತಾರ್ ಕೂಟ
ಬೆಂಗಳೂರು, ಮೇ 21: ಮಂಗಳೂರು ಮುಸ್ಲಿಂ ಯೂತ್ ಕೌನ್ಸಿಲ್ ವತಿಯಿಂದ ಮೇ 22ರಂದು ಸಂಜೆ ನಗರದ ಕಬ್ಬನ್ಪೇಟೆ ಮುಖ್ಯರಸ್ತೆಯಲ್ಲಿರುವ ಹಝ್ರತ್ ಹಮೀದ್ ಶಾ ಕಾಂಪ್ಲೆಕ್ಸ್ನ ಉರ್ದು ಹಾಲ್ನಲ್ಲಿ ಇಫ್ತಾರ್ ಕೂಟವನ್ನು ಆಯೋಜಿಸಲಾಗಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಿ.ಎಂ.ಉಮರ್ ಹಾಜಿ ವಹಿಸಲಿದ್ದಾರೆ. ಹಾಶಿಮ್ ಜೆಫ್ರಿ ತಂಙಳ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಕಲ್ಲೇಗ ಜುಮಾ ಮಸೀದಿ ಖತೀಬ್ ಅಬೂಬಕರ್ ಸಿದ್ದೀಕ್ ಜಲಾಲಿ ಮತ್ತು ಮೌಲಾನ ಎನ್.ಕೆ.ಎಂ.ಶಾಫಿ ಸಅದಿ ಕಾರ್ಯಕ್ರಮದಲ್ಲಿ ಮುಖ್ಯ ಪ್ರಭಾಷಣ ಮಾಡಲಿದ್ದಾರೆ.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ಝಮೀರ್ ಅಹ್ಮದ್ ಖಾನ್, ಯು.ಟಿ.ಖಾದರ್, ನಿವೃತ್ತ ಡಿಸಿಪಿ ಜಿ.ಎ.ಬಾವ, ಕೆಎಂಡಿಸಿ ಅಧ್ಯಕ್ಷ ಮುಹಮ್ಮದ್ ಝಫ್ರುಲ್ಲಾ ಖಾನ್, ಬಿಬಿಎಂಪಿ ಸದಸ್ಯ ಮುಜಾಹೀದ್ ಪಾಷ, ಇಮ್ರಾನ್ ಪಾಷ, ಪುತ್ತೂರು ಕಾರ್ಪೋರೇಟರ್ ಮುಹಮ್ಮದ್ ರಿಯಾಝ್ ಸೇರಿದಂತೆ ಇನ್ನಿತರರು ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
Next Story