ಇಬ್ಬರು ಚಿನ್ನಾಭರಣ ಕಳವು ಆರೋಪಿಗಳ ಬಂಧನ: 375 ಗ್ರಾಂ ಚಿನ್ನ ಜಪ್ತಿ
ಬೆಂಗಳೂರು, ಮೇ 21: ಚಿನ್ನಾಭರಣ ಕಳವು ಮಾಡುತ್ತಿದ್ದ ಆರೋಪದಡಿ ಇಬ್ಬರನ್ನು ಬಂಧಿಸಿರುವ ಇಲ್ಲಿನ ಕಾಡುಗೋಡಿ ಠಾಣಾ ಪೊಲೀಸರು, 10.20ಲಕ್ಷ ರೂ. ಮೌಲ್ಯದ 375 ಗ್ರಾಂ. ತೂಕದ ಚಿನ್ನಾಭರಣ, ಎರಡು ಮೊಬೈಲ್ ಜಪ್ತಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
ಕೋಲಾರ ಮೂಲದ ಸೂರ್ಯ(23), ಸಂಜೀವಪ್ಪ(48) ಬಂಧಿತ ಆರೋಪಿಗಳೆಂದು ವೈಟ್ಫೀಲ್ಡ್ ವಿಭಾಗದ ಡಿಸಿಪಿ ಅಬ್ದುಲ್ ಅಹದ್ ತಿಳಿಸಿದ್ದಾರೆ.
ಆರೋಪಿಗಳ ಬಂಧನದಿಂದ ಕಾಡುಗೋಡಿ ಪೊಲೀಸ್ ಠಾಣೆಯ ನಾಲ್ಕು ಕನ್ನ ಕಳವು ಪ್ರಕರಣ, ಸಂಪಿಗೆಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಒಂದು ಕಳವು ಪ್ರಕರಣ ಬೆಳಕಿಗೆ ಬಂದಿದ್ದು, ಈ ಸಂಬಂಧ ತನಿಖೆ ಮುಂದುವರೆಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
Next Story