ನಟಿ ಜಯಂತಿಗೆ ದತ್ತಿ ಪ್ರಶಸ್ತಿ
ಬೆಂಗಳೂರು, ಮೇ 22: ಡಾ.ರಾಜ್ಕುಮಾರ್ ಸಂಸ್ಕೃತಿ ದತ್ತಿ ಪ್ರಶಸ್ತಿ ಅನ್ನು ಕನ್ನಡ ಚಿತ್ರರಂಗದ ಹಿರಿಯ ನಟಿ ಜಯಂತಿ ಆಯ್ಕೆಯಾಗಿದ್ದಾರೆ.
ಮೇ 24ರಂದು ಸಂಜೆ 5 ಗಂಟೆಗೆ ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದ್ದು, ನಟ ಶಿವರಾಜ್ಕುಮಾರ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಡಾ. ಮನುಬಳಿಗಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಪ್ರಮುಖ ಗಣ್ಯರು ಭಾಗಿಾಗಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
Next Story