ತಡೆಗೋಡೆಗೆ ಬಿಎಂಟಿಸಿ ಬಸ್ ಢಿಕ್ಕಿ: ಪ್ರಯಾಣಿಕರಿಬ್ಬರಿಗೆ ಗಾಯ
ಬೆಂಗಳೂರು, ಮೇ 26: ನಿಯಂತ್ರಣ ತಪ್ಪಿ ಬಿಎಂಟಿಸಿ ಬಸ್ಯೊಂದು ತಡೆಗೋಡೆಗೆ ಢಿಕ್ಕಿ ಹೊಡೆದಿರುವ ಪರಿಣಾಮ ಪ್ರಯಾಣಿಕರಿಬ್ಬರಿಗೆ ಗಾಯವಾಗಿರುವ ಘಟನೆ ಇಲ್ಲಿನ ಯಶವಂತಪುರದಲ್ಲಿ ನಡೆದಿದೆ.
ರವಿವಾರ ಬೆಳ್ಳಂ ಬೆಳಗ್ಗೆ ಯಶವಂತಪುರ ಬಸ್ ನಿಲ್ದಾಣದಲ್ಲಿ ಕೆಂಗೇರಿ ಮಾರ್ಗದ ಬಿಎಂಟಿಸಿ ಬಸ್ಯೊಂದು ನಿಯಂತ್ರಣ ತಪ್ಪಿ ಗೋಡೆಗೆ ಢಿಕ್ಕಿ ಹೊಡೆದಿದ್ದು, ಇಬ್ಬರು ಪ್ರಯಾಣಿಕರಿಗೆ ಗಾಯಗಳಾಗಿವೆ. ಸ್ಥಳೀಯರ ಸಹಾಯದಿಂದ ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಘಟನೆಯಲ್ಲಿ ಬಿಎಂಟಿಸಿ ಬಸ್ ಸಂಪೂರ್ಣ ಜಖಂಗೊಂಡಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಚಾಲಕನ ನಿಯಂತ್ರಣ ತಪ್ಪಿ ಬಸ್ ಗೋಡೆಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದ್ದು, ಸ್ಥಳಕ್ಕೆ ಯಶವಂತಪುರ ಸಂಚಾರಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದರು.
Next Story