ಮಾಜಿ ರಾಜ್ಯಪಾಲರ ಮೊಮ್ಮಗಳು ಸಾವು
ಬೆಂಗಳೂರು. ಮೇ 27: ಕೇರಳದ ಮಾಜಿ ರಾಜ್ಯಪಾಲರಾದ ದಿ.ಬಿ.ರಾಚಯ್ಯ ಅವರ ಮೊಮ್ಮಗಳು ಸುಹಾಸಿನಿ(30) ಸೋಮವಾರ ಬೆಳಗ್ಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.
ಗರ್ಭೀಣಿಯಾಗಿದ್ದ ಸುಹಾಸಿನಿ, ಕಳೆದ 2 ದಿನಗಳ ಹಿಂದೆ ಹೆರಿಗೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಸೋಮವಾರ ಬೆಳಗ್ಗೆ 7:45 ರ ಸುಮಾರಿಗೆ ಗಂಡು ಮಗುವಿಗೆ ಜನ್ಮ ನೀಡಿದ ಕೆಲವೇ ನಿಮಿಷಗಳ ಅಂತರದಲ್ಲಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ.
ಸುಹಾಸಿನಿ ತುಂಬಾ ನಿಶಕ್ತರಾಗಿದ್ದರಿಂದ ಅವರ ಸಾವು ಉಂಟಾಗಿದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ಮೃತ ಸುಹಾಸಿನಿ ಅವರು ಮಾಜಿ ಶಾಸಕರಾದ ಎ.ಆರ್.ಕೃಷ್ಣಮೂರ್ತಿ ಅವರ ಸಹೋದರಿ ಉಮಾ ಹಾಗೂ ನಿವೃತ್ತ ಕೆಎಎಸ್ ಅಧಿಕಾರಿ ಪುಟ್ಟಮಾದಯ್ಯ ದಂಪತಿ ಪುತ್ರಿ ಎನ್ನಲಾಗಿದೆ.
Next Story