‘ಮಧ್ಯಂತರ ಚುನಾವಣೆ' ಬಗ್ಗೆ ಪುತ್ರ ನಿಖಿಲ್ ಹೇಳಿಕೆಗೆ ಸಿಎಂ ಕುಮಾರಸ್ವಾಮಿ ಹೇಳಿದ್ದೇನು ?
ಬೆಂಗಳೂರು, ಜೂ. 7: ‘ರಾಜ್ಯದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರಕಾರ ತನ್ನ ಐದು ವರ್ಷದ ಅವಧಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸುತ್ತದೆ. ಮಧ್ಯಂತರ ಚುನಾವಣೆಯ ವಿಷಯವೇ ಈಗ ಅಪ್ರಸ್ತುತ’ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.
‘ಮಂಡ್ಯ ಕ್ಷೇತ್ರದ ಪರಾಜಿತ ಅಭ್ಯರ್ಥಿ ನಿಖಿಲ್ ಹೇಳಿಕೆಯನ್ನು ಮಾಧ್ಯಮಗಳು ಚುನಾವಣೆ ಯಾವಾಗ ಬೇಕಾದರೂ ಎದುರಾಗಬಹುದು ಎನ್ನುವಂತೆ ಬಿಂಬಿಸಿದ್ದು, ಇದು ವಾಸ್ತವಕ್ಕೆ ದೂರವಾದ ಸಂಗತಿ ಎಂದು ಕುಮಾರಸ್ವಾಮಿ ಇದೇ ವೇಳೆ ಸ್ಪಷ್ಟಪಡಿಸಿದ್ದಾರೆ.
‘ಪಕ್ಷದ ಕಾರ್ಯಕರ್ತರು ಸದಾ ಸಮಾಜ ಸೇವೆಗೆ ಸನ್ನದ್ಧರಾಗಿರಬೇಕು. ಚುನಾವಣೆ ಕಾಲದಲ್ಲಿ ಮಾತ್ರ ಹೋರಾಟ ಎಂದಾಗದೇ ಯಾವಾಗ ಚುನಾವಣೆ ಎದುರಾದರೂ ಜಯ ಗಳಿಸುವ ಸ್ಥಿತಿಯಲ್ಲಿ ಪಕ್ಷವನ್ನು ಚುರುಕಾಗಿಟ್ಟಿರಬೇಕೆಂದು ನಿಖಿಲ್, ಪಕ್ಷದ ಕಾರ್ಯಕರ್ತರನ್ನು ಉದ್ಧೇಶಿಸಿ ಮಾತನಾಡುತ್ತಾ ಹುರಿದುಂಬಿಸಿದ್ದಾರೆ. ಇದನ್ನು ಸಂದರ್ಭ ರಹಿತವಾಗಿ ಉಲ್ಲೇಖಿಸಿರುವುದು ಸಲ್ಲ ಎಂದು ಅವರು ಆಕ್ಷೇಪಿಸಿದ್ದಾರೆ.
Next Story