ವೈದ್ಯರು ಕೂಡಲೇ ಕರ್ತವ್ಯಕ್ಕೆ ಹಾಜರಾಗಬೇಕು: ಸಿಎಂ ಕುಮಾರಸ್ವಾಮಿ ಸೂಚನೆ
ಬೆಂಗಳೂರು, ಜೂ. 17: ‘ವೈದರ ಮೇಲೆ ಹಲ್ಲೆ ಖಂಡನೀಯ. ಆದರೆ, ವೈದರು ಮುಷ್ಕರ ನಿರತರಾದರೆ ಸಹಸ್ರಾರು ರೋಗಿಗಳಿಗೆ ತೊಂದರೆಯಾಗುತ್ತದೆ’ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ, ಪ್ರತಿಭಟನಾನಿತರ ವೈದ್ಯರಿಗೆ ಇಂದಿಲ್ಲಿ ಕಿವಿಮಾತು ಹೇಳಿದ್ದಾರೆ.
‘ಈಗಾಗಲೇ ಹಲವು ಆಸ್ಪತ್ರೆಗಳಲ್ಲಿ ರೋಗಿಗಳಿಗೆ ತೊಂದರೆಯಾಗಿದೆ. ಮುಷ್ಕರವನ್ನು ನಿರ್ಬಂಧಿಸಿ ರಾಜ್ಯ ಸರಕಾರ ಮೂರು ದಿನಗಳ ಹಿಂದೆಯೇ ಸುತ್ತೋಲೆ ಹೊರಡಿಸಿದೆ. ಕೂಡಲೇ ವೈದ್ಯರು ಕರ್ತವ್ಯಕ್ಕೆ ಹಾಜರಾಗಬೇಕು’ ಎಂದು ಕುಮಾರಸ್ವಾಮಿ ಟ್ವಿಟ್ಟರ್ ಮೂಲಕ ಸೂಚನೆ ನೀಡಿದ್ದಾರೆ.
Next Story