ಅಪರಿಚಿತ ವಾಹನ ಢಿಕ್ಕಿ: ಖಾಸಗಿ ಕಂಪೆನಿ ಅಧಿಕಾರಿ ಮೃತ್ಯು
ಬೆಂಗಳೂರು, ಜು.2: ವೇಗವಾಗಿ ಬಂದ ಅಪರಿಚಿತ ವಾಹನ ಢಿಕ್ಕಿ ಹೊಡೆದು ಬೈಕ್ನಲ್ಲಿ ಹೋಗುತ್ತಿದ್ದ ಖಾಸಗಿ ಕಂಪೆನಿಯ ಅಧಿಕಾರಿಯೊಬ್ಬರು ಮೃತಪಟ್ಟ ಘಟನೆ ಎಲೆಕ್ಟ್ರಾನಿಕ್ ಸಿಟಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಕೋನಪ್ಪನ ಅಗ್ರಹಾರದ ಬಳಿ ಮಂಗಳವಾರ ಮುಂಜಾನೆ ನಡೆದಿದೆ.
ದೊಡ್ಡ ತೊಗೂರಿನ ಪ್ರೇಮ್ಕುಮಾರ್(25) ಎಂಬುವರು ಮೃತಪಟ್ಟಿರುವುದಾಗಿ ಪೊಲೀಸರು ಗುರುತಿಸಿದ್ದಾರೆ.
ಬಿಹಾರ ಮೂಲದ ಪ್ರೇಮ್ಕುಮಾರ್ ಟೆಲಿಜೆಡ್ ಕಂಪೆನಿಯಲ್ಲಿ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು. ದೊಡ್ಡ ತೊಗೂರಿನ ಮನೆಯಿಂದ ಕೆಲಸಕ್ಕೆ ಬೈಕ್ನಲ್ಲಿ ಹೋಗುತ್ತಿದ್ದಾಗ ಮಾರ್ಗಮಧ್ಯೆ ಕೋನಪ್ಪನ ಅಗ್ರಹಾರ ಸಿಗ್ನಲ್ ಬಳಿ ಮಂಗಳವಾರ ಮುಂಜಾನೆ ಅಪರಿಚಿತ ವಾಹನ ಢಿಕ್ಕಿ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಈ ಸಂಬಂಧ ಎಲೆಕ್ಟ್ರಾನಿಕ್ ಸಿಟಿ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.
Next Story