ಕರ್ನಾಟಕ ಮುಕ್ತ ವಿವಿಯಲ್ಲಿ ಪ್ರವೇಶಾತಿಗೆ ಅರ್ಜಿ ಆಹ್ವಾನ
ಬೆಂಗಳೂರು, ಜು.4: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಪ್ರಸಕ್ತ 2019-20ನೆ ಶೈಕ್ಷಣಿಕ ಸಾಲಿನ ಪ್ರವೇಶಾತಿ ಆರಂಭವಾಗಿದ್ದು, ಸ್ನಾತಕ, ಸ್ನಾತಕೋತ್ತರ ಕೋರ್ಸ್ಗಳಾದ ಬಿಎ, ಬಿ.ಕಾಂ., ಎಂಎ, ಎಂಸಿಜೆ, ಎಂಕಾಂ, ಎಂಎಸ್ಸಿ, ಡಿಪ್ಲೋಮಾ ಸರ್ಟಿಫಿಕೇಟ್ ಸೇರಿದಂತೆ ಹಲವು ಕೋರ್ಸ್ಗಳಿಗೆ ಪ್ರವೇಶಾತಿಯನ್ನು ಮಾಡಿಕೊಳ್ಳಲಾಗುತ್ತಿದೆ.
ಪ್ರಥಮ ವರ್ಷದ ಈ ಮೇಲ್ಕಂಡ ಕೋರ್ಸ್ಗಳ ಪ್ರವೇಶಾತಿಗೆ ದಂಡ ಶುಲ್ಕವಿಲ್ಲದೆ ಜು.25 ಕಡೆಯ ದಿನವಾಗಿರುತ್ತದೆ. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ಬೆಂಗಳೂರಿನಲ್ಲಿ 3 ಪ್ರಾದೇಶಿಕ ಕೇಂದ್ರಗಳನ್ನು ಮಲ್ಲೇಶ್ವರಂ, ಚಾಮರಾಜಪೇಟೆ ಮತ್ತು ಹೆಬ್ಬಾಳದಲ್ಲಿ ಮಾತ್ರ ತೆರೆದಿದ್ದು ಈ ಪ್ರಾದೇಶಿಕ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಿ ಪ್ರವೇಶಾತಿ ಪಡೆಯಲು ತಿಳಿಸಲಾಗಿದೆ.
ವಿದ್ಯಾರ್ಥಿಗಳು ಪ್ರಾದೇಶಿಕ ಕೇಂದ್ರಗಳಲ್ಲದೆ ಬೇರೆ ಯಾವುದೇ ಅನಧಿಕೃತ ಅಧ್ಯಯನ ಕೇಂದ್ರಗಳಲ್ಲಿ ಅರ್ಜಿಗಳನ್ನು ಖರೀದಿಸಿ ಪ್ರವೇಶಾತಿ ಹೊಂದಿ ವಂಚನೆಗೊಳಗಾಗಬಾರದೆಂದು ಪ್ರಾದೇಶಿಕ ನಿರ್ದೇಶಕ ಡಾ. ಲೋಕೇಶ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ವಿಶೇಷ ಸೂಚನೆ: ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳು ಅಗತ್ಯ ದಾಖಲೆಗಳನ್ನು ಒದಗಿಸಿದಲ್ಲಿ ಪ್ರವೇಶಾತಿ ಶುಲ್ಕದಲ್ಲಿ ವಿನಾಯಿತಿ ಪಡೆಯಬಹುದಾಗಿರುತ್ತದೆ ಹಾಗೂ ಬಿಪಿಎಲ್ ಕಾರ್ಡ್ ಅನ್ನು ಹೊಂದಿರುವ ಮಹಿಳಾ ವಿದ್ಯಾರ್ಥಿಗಳಿಗೆ ಬೋಧನಾ ಶುಲ್ಕದಲ್ಲಿ ಶೇ.25ರಷ್ಟು ವಿನಾಯಿತಿ ನೀಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: ಪ್ರಾದೇಶಿಕ ನಿರ್ದೇಶಕರು, ಕರ್ನಾಟಕ ರಾಜ್ಯ ಮುಕ್ತ ಮಹಿಳಾ ಪ್ರಾದೇಶಿಕ ಕೇಂದ್ರ, ಸರಕಾರಿ ಪದವಿ ಪೂರ್ವ ಬಾಲಕಿಯರ ಕಾಲೇಜು, 4ನೇ ಮುಖ್ಯರಸ್ತೆ, 13ನೇ ಅಡ್ಡರಸ್ತೆ, ಮಲ್ಲೇಶ್ವರಂ, ಬೆಂಗಳೂರು-03. ಕಚೇರಿ ದೂ.080 23448811, 98445-06629, 96203-95584, 77608-48564ಕ್ಕೆ ಸಂಪರ್ಕಿಸಲು ಪ್ರಕಟನೆಯಲ್ಲಿ ತಿಳಿಸಲಾಗಿದೆ.